Main News

ಅತ್ಯಾಚಾರ ಪ್ರಕರಣ: ಕೇರಳ, ತಮಿಳುನಾಡಿಗೆ ಪೊಲೀಸರ ತಂಡ

ಮೈಸೂರಿನಲ್ಲಿ ಕಳೆದ ಮಂಗಳವಾರ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ದೊರೆತ ಸುಳಿವಿನ ಮೇರೆಗೆ ಎರಡು ತಂಡಗಳು ತಮಿಳುನಾಡು ಮತ್ತು ಕೇರಳಕ್ಕೆ ತೆರಳಿದೆ ಎಂದು ವರದಿಯಾಗಿದೆ.


ಮೈಸೂರಿನಲ್ಲಿ ಓದುತ್ತಿರುವ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಈ ದುಷೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಮೇರೆಗೆ ಮೈಸೂರು ಪೊಲೀಸರ ತಂಡ ತೆರಳಿದೆ. ತಮಿಳುನಾಡಿನ ಒಬ್ಬ ಮತ್ತು ಕೇರಳ ಮೂವರು ವಿದ್ಯಾರ್ಥಿಗಳು ಭಾಗಿಯಾಗಿರುವ ಶಂಕೆ ಇದೆ.


ಘಟನೆ ನಡೆದ ಮಾರನೇ ದಿನವೂ ಮೈಸೂರಿನಲ್ಲೇ ಇದ್ದ ಈ ಆರೋಪಿಗಳು ವಿಷಯ ಬಹಿರಂಗಗೊಳ್ಳುತ್ತಲೇ ನಗರದಿಂದ ಹೊರಟಿದ್ದಾರೆ ಎನ್ನಲಾಗಿದೆ. ಬುಧವಾರ ನಡೆದ ಪರೀಕ್ಷೆಯಲ್ಲಿ ಐವರು ವಿದ್ಯಾರ್ಥಿಗಳು ಗೈರು ಆಗಿರುವುದು ಪೊಲೀಸರ ಅನುಮಾನವನ್ನು ಇಮ್ಮಡಿಗೊಳಿಸಿದೆ.


ಇಂದು ಸಂಜೆ ಪತ್ರಿಕಾಗೋಷ್ಠಿ: ಈಗ ಮೈಸೂರಿನಲ್ಲಿರುವ ಗೃಹಸಚಿವ ಆರಗಜ್ಞಾನೇಂದ್ರ ಅವರು ಸಂಜೆ 5.3೦ಕ್ಕೆ ಪತ್ರಿಕಾಗೋಷ್ಠಿ ನಡೆಸುವರು. ಅಲ್ಲಿ ಕೆಲವು ಮಹತ್ವದ ವಿಚಾರಗಳನ್ನು ಬಹಿರಂಗಗೊಳಿಸುವರೆಂದು ಹೇಳಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024