ಮಂಡ್ಯದ ಮಳವಳ್ಳಿಯಲ್ಲಿ ಟ್ಯೂಶನ್ಗೆ ಹೋಗಿದ್ದ ಬಾಲಕಿ ಕೊಲೆ ಪ್ರಕರಣದ ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಆಗಿರುವುದು ದೃಢಪಟ್ಟಿದೆ, ಟ್ಯೂಶನ್ ಮೇಲ್ವಿಚಾರಕ ಕಾಂತರಾಜು ಈ ಹೇಯ ಕೃತ್ಯವೆಸಗಿದ್ದಾನೆ ಆ ಕಾಮುಕನನ್ನು ಬಂಧಿಸಲಾಗಿದೆ.
ಮಳವಳ್ಳಿ ಪಟ್ಟಣದಲ್ಲಿ ಮಂಗಳವಾರ ಟ್ಯೂಶನ್ಗೆ ಹೋಗಿದ್ದ ಬಾಲಕಿ ನೀರಿನ ಸಂಪ್ನಲ್ಲಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಳು. ಈ ಸಂಬಂಧ ಮೊದಲು ಸೆಕ್ಷನ್ 302 ಪ್ರಕರಣದಡಿ ಮಳವಳ್ಳಿ ಟೌನ್ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಆದರೆ ಮರಣೋತ್ತರ ಪರೀಕ್ಷೆ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಹಾಗಾಗಿ 302 ಸೆಕ್ಷನ್ ಜೊತೆಗೆ ಪೋಸ್ಕೋ ಹಾಗೂ 307 ಪ್ರಕರಣಗಳನ್ನು ಸೇರ್ಪಡೆಗೊಳಿಸಲಾಗಿದೆ.
ಮಂಗಳವಾರ ಟ್ಯೂಶನ್ ಎಷ್ಟು ಗಂಟೆಗಿದೆ ಎಂದು ವಿಚಾರಿಸಲು ಬಾಲಕಿ ಮೇಲ್ವಿಚಾರಕನಿಗೆ ಫೋನ್ ಮಾಡಿದ್ದಳು. ಸಂಜೆ 5 ಗಂಟೆಗೆ ಟ್ಯೂಶನ್ ಇದ್ದರೂ ಬೆಳಗ್ಗೆ 11.30ಕ್ಕೆ ಬರುವಂತೆ ಕಾಂತರಾಜು ಹೇಳಿದ್ದನು. ಮುರುಘಾ ಸ್ವಾಮೀಜಿಯಿಂದ ಮತ್ತಿಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮೈಸೂರಿನಲ್ಲಿ FIR ದಾಖಲು
ನಂತರ ಟ್ಯೂಷನ್ಗೆ ಬಂದ ಬಾಲಕಿ ಮೇಲೆ ಕಾಂತರಾಜು ಅತ್ಯಾಚಾರವೆಸಗಿದ್ದಾನೆ. ಬಳಿಕ ವಿಚಾರ ಬಹಿರಂಗವಾಗುತ್ತದೆ ಎಂದು ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಬಾಲಕಿಯ ಕತ್ತು ಹಿಸುಕಿ, ಬಳಿಕ ಕಲ್ಲಿನಿಂದ ತಲೆಯ ಭಾಗಕ್ಕೆ ಹೊಡೆದು ಹತ್ಯೆಗೈದಿದ್ದಾನೆ.
ಕೊಲೆ ನಂತರ ನಿರ್ಮಾಣ ಹಂತದ ಮನೆಯ ಸಂಪ್ಗೆ ಮೃತದೇಹ ಹಾಕಿ ಪರಾರಿಯಾಗಿದ್ದನು. ನೀಚ ಕೃತ್ಯ ನಡೆಸಿ ತನಗೇನು ಗೊತ್ತೇ ಇಲ್ಲ ಎಂಬಂತೆ ಬಾಲಕಿಯ ಕುಟುಂಬಸ್ಥರ ಜೊತೆ ಸೇರಿ ಆಕೆಗಾಗಿ ಹುಡುಕಾಟ ನಡೆಸಿದ್ದಾನೆ. ಅಲ್ಲದೇ ಪೊಲೀಸರು ಬಂದಾಗಲೂ ಸ್ಥಳದಲ್ಲೇ ಇದ್ದ ಕಾಂತರಾಜು ತನಗೇನು ಗೊತ್ತಿಲ್ಲ ಎಂಬಂತೆ ನಾಟಕ ಮಾಡಿದ್ದಾನೆ. ನಂತರ ಈ ಪ್ರಕರಣಕ್ಕೆ ಸಂಬಂಧ ಕಾಂತರಾಜುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ. ಟ್ಯೂಷನ್ ಮೇಲೆನ ರೂಮ್ನಲ್ಲೇ ವಾಸವಿದ್ದ ಕಾಂತರಾಜು ಹೆಂಡತಿ, ಇಬ್ಬರು ಹೆಣ್ಣು ಮಕ್ಕಳಿಂದ ದೂರವಾಗಿ ಬದುಕುತ್ತಿದ್ದನು.
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
This website uses cookies.
Leave a Comment