ಸಿದ್ದರಾಮಯ್ಯನವರ ಸಿಎಂ ಆಗಿದ್ದ ವೇಳೆಯಲ್ಲಿ ವಿಚಾರವಾದಿ ಕೆ.ಎಸ್. ಭಗವಾನ್ ಅವರಿಗೆ ನೀಡಿದ್ದ ಪೋಲೀಸ್ ರಕ್ಷಣೆಯನ್ನು ರದ್ದು ಮಾಡುವಂತೆ ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿಯ ರಾಜ್ಯಾಧ್ಯಕ್ಷ ಡಾ. ಸುಧಾಕರ ಹೊಸಳ್ಳಿ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬರೆದ ಪತ್ರದಲ್ಲಿ ಡಾ. ಹೊಸಳ್ಳಿ, ‘ಸಂವಿಧಾನ ಉಲ್ಲಂಘನೆಯ ಮುಖಾಂತರ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತರುತ್ತಿರುವ ಕೆಎಸ್ ಭಗವಾನ್ ಇವರಿಗೆ ನೀಡಿರುವ ಸರ್ಕಾರಿ ರಕ್ಷಣೆಯನ್ನು ಹಿಂಪಡೆಯಲು ಹಾಗೂ ನಿವೃತ್ತಿ ವೇತನ ತಡೆಹಿಡಿಯಬೇಕು. ಕೆಎಸ್ ಭಗವಾನ್ ಹಲವು ವರ್ಷಗಳಿಂದ ಸಂವಿಧಾನದ 19ನೇ ವಿಧಿಯ ಒಂದನೇ ಉಪವಿಧಿ ಅನುಸಾರ ಅಭಿವ್ಯಕ್ತಿ ಸ್ವಾತಂತ್ರ್ಯದಡಿಯಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಗಲುವಂತೆ ಮಾತನಾಡುತ್ತ ಬಂದಿರುವುದು ಸ್ಪಷ್ಟವಾಗಿ ಸಂವಿಧಾನದ ಉಲ್ಲಂಘನೆಯಾಗಿದೆ’ ಎಂದು ಹೇಳಿದ್ದಾರೆ.
‘ಸಂವಿಧಾನದ 19 ನೇ ವಿಧಿಯ ಎರಡನೇ ಉಪ ವಿಧಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವೂ ಬೇರೊಬ್ಬರ ಸ್ವಾತಂತ್ರ್ಯವನ್ನು ಮೊಟಕುಗೊಳಿಸಬಾರದು ಎಂಬ ನಿರ್ಬಂಧವನ್ನು ಹೇರಲಾಗಿದೆ. ಆದರೂ ಭಗವಾನ್ ನಿರಂತರವಾಗಿ ಡಾ ಬಿ ಆರ್ ಅಂಬೇಡ್ಕರ್ ಹಿಂದುಗಳಿಗೆ ನೀಡಿರುವ ಸಾಂವಿಧಾನಿಕ ಧಾರ್ಮಿಕ ಹಕ್ಕುಗಳನ್ನು (25,26,27,28 ನೇ ವಿಧಿಗಳು) ಉದ್ದೇಶಪೂರ್ವಕವಾಗಿ ಉಲ್ಲಂಘಿಸುತ್ತಾ ಬಂದಿದ್ದಾರೆ. ಇದು ಸಂವಿಧಾನದ ಉಲ್ಲಂಘನೆಯಾಗಿದೆ. ಕಳೆದ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ, ದುರುದ್ದೇಶದಿಂದ ಈ ವ್ಯಕ್ತಿಗೆ, ಸರ್ಕಾರಿ ಪೊಲೀಸ್ ರಕ್ಷಣೆಯನ್ನು ನೀಡಿತ್ತು . ಭಗವಾನ್ ಅವರು ಅವಕಾಶವನ್ನು ಬಳಸಿಕೊಂಡು ಭಗವಾನ್ ಹಿಂದೂಗಳನ್ನು ಹೀಯಾಳಿಸುವಂತೆ, ಪ್ರಚೋದನಕಾರಿಯಾಗಿ, ‘ಹಿಂದೂ ಎಂಬ ಪದವೇ ಅವಮಾನಕರ ಅದನ್ನು ತೆಗೆಯಬೇಕು ಎಂಬ ಹೇಳಿಕೆ’ ಎಂದು ಮಾತನಾಡುತ್ತ ಮಾತನಾಡುತ್ತ ಸಂವಿಧಾನಿಕ ಹಕ್ಕುಗಳನ್ನು ಖಂಡಿಸುತ್ತಾ ಬಂದಿದ್ದಾರೆ. ಸಂವಿಧಾನದ ಹಕ್ಕುಗಳ ಉಲ್ಲಂಘನೆಯೆಂದರೆ ಅದು ಅಂಬೇಡ್ಕರ್ ಅವರಿಗೆ ಮಾಡುವ ಅಪಮಾನ. ಸರ್ಕಾರಕ್ಕೆ ಮಾಡುವ ಅವಮಾನ ಭಗವಾನ್ ತಮ್ಮ ಪ್ರಚಾರದ ಗೀಳಿಗೆ ಬಹುಸಂಖ್ಯಾತ ಹಿಂದೂ ಧರ್ಮೀಯರನ್ನು ನಿಂದನೆ ಮಾಡುವುದು ಸೂಕ್ತವಲ್ಲ’ ಎಂದು ಭಗವಾನ್ ಅವರ ಮೇಲೆ ಹರಿಹಾಯ್ದಿದ್ದಾರೆ.
ಸರ್ಕಾರ ಆತನ ಸರ್ಕಾರಿ ರಕ್ಷಣೆಯನ್ನು ಸಂವಿಧಾನದ 19 ನೇ ವಿಧಿಯ ಎರಡನೇ ಉಪ ವಿಧಿಯನ್ವಯ ಕೂಡಲೇ ಪಡೆಯದಿದ್ದರೆ ಭಗವಾನ್ ಅವರ ನಡುವಳಿಕೆ, ಸಂವಿಧಾನಕ್ಕೆ ಮಾಡುವ ಅಪಮಾನ ಸರ್ಕಾರ ಪ್ರಾಯೋಜಕತ್ವವೇ ಆಗುತ್ತದೆ.’ ಅಲ್ಲದೇ ಭಗವಾನ್
ಮೈ ಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ. ಕೆಸಿಎಸ್ಆರ್ ನಿಯಮಗಳು ಪ್ರಸ್ತುತ ಅನ್ವಯವಾಗದಿದ್ದರೂ, ಜನರ ತೆರಿಗೆ ಹಣದಲ್ಲಿ ಜೀವನ ನಿರ್ವಹಣೆಗಾಗಿ ನಿವೃತ್ತಿ ವೇತನವನ್ನು ಸರ್ಕಾರ ನೀಡುತ್ತಿರುವುದು ಸಾಂವಿಧಾನಿಕ ನಿಯಮಗಳ ಅಡಿಯಲ್ಲಿಯೇ. ಹೀಗಾಗಿ ಸರ್ಕಾರ, ಸಂವಿಧಾನಕ್ಕೆ ವಿರುದ್ಧವಾಗಿ ನಡೆಯುವವರು ತಮ್ಮ ಹಕ್ಕು ಚಲಾವಣೆಗೆ ಅರ್ಹರಾಗಿರುವುದಿಲ್ಲ. ಉನ್ನತ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿ, ನಿವೃತ್ತಿವೇತನ ತಡೆಹಿಡಿಯಲು ನಿರ್ದೇಶನ ನೀಡಬೇಕೆಂದು ಸಮಿತಿಯು ಒತ್ತಾಯಿಸುತ್ತದೆ’ ಎಂದು ಕಿಡಿ ಕಾರಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
View Comments
Very welll said.