ರಾಷ್ಟ್ರೀಯ

ಕರ್ನಾಟಕದ ಮತ್ತೊಂದು ಬ್ಯಾಂಕ್ ಲೈಸೆನ್ಸ್ ರದ್ದು ಮಾಡಿದ RBI

RBI ಎರಡು ಕೋಪರೇಟಿವ್ ಬ್ಯಾಂಕ್‌ಗಳ ಲೈಸೆನ್ಸ್ ರದ್ದು ಮಾಡಿದೆ. ಮಹಾರಾಷ್ಟ್ರದ ಸತಾರದ ಹರೀಹರೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಮತ್ತು ಕರ್ನಾಟಕದ ಶ್ರೀ ಶಾರದ ಮಹಿಳಾ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್ ತನ್ನ ಲೈಸೆನ್ಸ್ ಅನ್ನು ಕಳೆದುಕೊಂಡಿದೆ.

ಈ ಸಹಕಾರಿ ಬ್ಯಾಂಕ್‌ಗಳು ಸಾಕಷ್ಟು ಬಂಡವಾಳ ಮತ್ತು ಗಳಿಕೆಯನ್ನು ಹೊಂದಿಲ್ಲ. ಹಾಗೆಯೇ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯನ್ನು ಅನುಸರಿಸುವಲ್ಲಿ ವಿಫಲವಾಗಿದೆ ಎಂದು RBI ಹೇಳಿದೆ.

ಈ ಎರಡು ಕೋಆಪರೇಟಿವ್ ಬ್ಯಾಂಕ್‌ಗಳ ಲೈಸೆನ್ಸ್ ಅನ್ನು ರದ್ದು ಮಾಡಿ, ಬ್ಯಾಂಕಿಂಗ್ ವಹಿವಾಟನ್ನು ನಿಲ್ಲಿಸುವಂತೆ ಜುಲೈ 11, 2023ರ ದಿನಾಂಕವನ್ನು ಉಲ್ಲೇಖಿಸಿ ಎರಡು ಪ್ರತ್ಯೇಕ ಆದೇಶ ಪತ್ರವನ್ನು RBI ಬಿಡುಗಡೆ ಮಾಡಿದೆ.

ಶ್ರೀ ಶಾರದ ಮಹಿಳಾ ಕೋಆಪರೇಟಿವ್ ಬ್ಯಾಂಕ್

ತುಮಕೂರು ಮೂಲದ ಶ್ರೀ ಶಾರದಾ ಮಹಿಳಾ ಸಹಕಾರಿ ಬ್ಯಾಂಕ್‌ನಲ್ಲಿ, ಶೇಕಡ 97.82ರಷ್ಟು ಡೆಪಾಸಿಟ್‌ದಾರರು ತಮ್ಮ ಡೆಪಾಸಿಟ್‌ನ ಪೂರ್ಣ ಮೊತ್ತವನ್ನು ಡಿಐಸಿಜಿಸಿಯಿಂದ ಸ್ವೀಕರಿಸಲು ಅರ್ಹರಾಗಿದ್ದಾರೆ. 12 ಜೂನ್ 2023 ರಂತೆ, ಕರ್ನಾಟಕ ಮೂಲದ ಬ್ಯಾಂಕ್‌ನ ಡೆಪಾಸಿಟ್‌ದಾರರಿಗೆ ಡಿಐಸಿಜಿಸಿ 15.06 ಕೋಟಿ ರೂಪಾಯಿಯನ್ನು ಪಾವತಿ ಮಾಡಿದೆ.

ಹರೀಹರೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್

ಹರೀಹರೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಸಲ್ಲಿಕೆ ಮಾಡಿದ ಡೇಟಾ ಪ್ರಕಾರ ಇದರ ಒಟ್ಟು ಗ್ರಾಹಕರ ಪೈಕಿ ಸುಮಾರು ಶೇಕಡ 99.96ರಷ್ಟು ಗ್ರಾಹಕರು ಡಿಐಸಿಜಿಸಿಯಿಂದ ತಮ್ಮ ಡೆಪಾಸಿಟ್‌ನ ಸಂಪೂರ್ಣ ಮೊತ್ತವನ್ನು ಪಡೆಯಲು ಅರ್ಹರಾಗಿದ್ದಾರೆ. ಡಿಐಸಿಜಿಸಿ ಈಗಾಗಲೇ ಸತಾರಾ ಮೂಲದ ಬ್ಯಾಂಕ್‌ನ ಡೆಪಾಸಿಟ್‌ದಾರರಿಗೆ ಒಟ್ಟು ವಿಮಾ ಡೆಪಾಸಿಟ್‌ಗಳಿಗೆ 57.24 ಕೋಟಿ ರೂಪಾಯಿ ಪಾವತಿ ಮಾಡಿದೆ.

ಎರಡು ಬ್ಯಾಂಕುಗಳ ಕಾರ್ಯನಿರ್ವಹಣೆ ಮುಂದುವರಿವುದು ಬ್ಯಾಂಕ್‌ಗಳ ಗ್ರಾಹಕರ ಹಿತಾಸಕ್ತಿಗೆ ಹಾನಿಕಾರಕವಾಗಿದೆ. ಈ ಬ್ಯಾಂಕುಗಳು ಪ್ರಸ್ತುತ ಇರುವ ಸ್ಥಿತಿಯಲ್ಲಿ ತನ್ನ ಗ್ರಾಹಕರು ಬ್ಯಾಂಕ್‌ನಲ್ಲಿ ಡೆಪಾಸಿಟ್ ಮಾಡಿದ ಸಂಪೂರ್ಣ ಮೊತ್ತವನ್ನು ಮರುಪಾವತಿನ ಮಾಡಲು ಸಾಧ್ಯವಾಗದು. ಈ ಬ್ಯಾಂಕುಗಳಿಗೆ ಬ್ಯಾಂಕಿಂಗ್ ವಹಿವಾಟನ್ನು ಮುಂದುವರಿಸಲು ಅವಕಾಶ ನೀಡಿದರೆ, ಸಾರ್ವಜನಿಕರ ಹಿತಾಸಕ್ತಿಗೆ ಇನ್ನಷ್ಟು ದಕ್ಕೆ ಉಂಟಾಗಲಿದೆ, ಎಂದು RBI ತಿಳಿಸಿದೆ.

RBI ಏಪ್ರಿಲ್‌ನಲ್ಲಿ ಲೈಸೆನ್ಸ್ ರದ್ದುಗೊಳಿಸಿದ ಬ್ಯಾಂಕ್‌ಗಳು

ಸೇವಾ ವಿಕಾಸ್ ಕೋಪರೇಟಿವ್ ಬ್ಯಾಂಕ್, ಡೆಕ್ಕಾನ್ ಅರ್ಬನ್ ಕೋಪರೇಟಿವ್, ಮಿಲ್ಲತ್ ಕೋಆಪರೇಟಿವ್ ಬ್ಯಾಂಕ್, ಮುದೋಲ್ ಕೋಆಪರೇಟಿವ್ ಬ್ಯಾಂಕ್, ಶ್ರೀ ಆನಂದ್ ಕೋಆಪರೇಟಿವ್ ಬ್ಯಾಂಕ್, ರುಪೀ ಕೋಆಪರೇಟಿವ್ ಬ್ಯಾಂಕ್, ಬಾಬಾಜಿ ಡೇಟ್ ಮಹಿಳಾ ಅರ್ಬನ್ ಬ್ಯಾಂಕ್ ಮತ್ತು ಲಕ್ಷ್ಮೀ ಕೋಆಪರೇಟಿವ್ ಬ್ಯಾಂಕ್‌ ಬ್ಯಾಂಕಿಂಗ್ ವಹಿವಾಟು ಮಾಡುವ ಪರವಾನಗಿಯನ್ನು ಕಳೆದುಕೊಂಡ ಬ್ಯಾಂಕ್‌ಗಳಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಪಾದಚಾರಿಗಳ ಮೇಲೆ ಬೈಕ್ ಹರಿದು ನಾಲ್ವರು ಸಾವು

ವಿಜಯಪುರ: ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ… Read More

September 6, 2024

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ಕಲಿಸಿ ಸಮಾಜದಲ್ಲಿ ಒಂದು ಉತ್ತಮವಾಗಿ… Read More

September 5, 2024

ಗುರು ಎಂಬೊ ಅರಿವಿನ ವಿಸ್ತಾರ….

'ಗುರುವಿನ ಗುಲಾಮನಾಗುವ ತನಕದೊರೆಯದಣ್ಣ ಮುಕುತಿ".ಎಂದು ಪುರಂದರದಾಸರು ಗುರುವಿನ ಮಹಿಮೆಯನ್ನು ಬಹು ಹಿಂದೆಯೇ ಹೇಳಿದ್ದಾರೆ,  ಪ್ರಾಚೀನ ಕಾಲದಲ್ಲಿ ಗುರು ತನ್ನ ಶಿಷ್ಯನಿಗೆ  ತನ್ನ… Read More

September 5, 2024

ನಿಸ್ವಾರ್ಥ ಜೀವಿ ಜ್ಞಾನದ ಭುವಿ

"ಗುರುವಿನ ಗುಲಾಮನಾಗುವ ತನಕ ದೊರೆಯದೆನ್ನ ಮುಕುತಿ"ಎಂಬಂತೆ ವಿದ್ಯಾರ್ಥಿಗಳು ಗುರುವಿನ ಗುಲಾಮನಾದಾಗಲೇ ಅಪ್ರತಿಮ ಬದುಕು ರೂಪಿಸಿಕೊಳ್ಳುವನು ಎಂಬುದು ಅಕ್ಷರಶಃ ಸತ್ಯ.ಅಕ್ಷರಗಳ ಕಲಿಸುತ… Read More

September 5, 2024

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ… Read More

September 5, 2024

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಜೋಡಿ

ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್… Read More

September 5, 2024