ಐಪಿಎಲ್ 20-20ಯ 46ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ರೋಚಕ ಗೆಲುವನ್ನು ಸಾಧಿಸಿತು.
ದುಬೈನ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಮ್ಐ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಆರ್ಸಿಬಿ ತಂಡದಿಂದ ಆರಂಭಿಕ ಆಟಗಾರರಾಗಿ ಫೀಲ್ಡಿಗಿಳಿದ ಜೆ. ಫಿಲಿಪ್ ಹಾಗೂ ದೇವದತ್ ಪಡಿಕ್ಕಲ್ ಆಟಕ್ಕೆ ಉತ್ತಮ ಆರಂಭವವನ್ನು ನೀಡಿದರು. ಫಿಲಿಪ್ 24 ಎಸೆತಗಳಿಗೆ 33 ರನ್ ಗಳಿಸಿದರೆ, ಪಡಿಕ್ಕಲ್ 45 ಎಸೆತಗಳಿಗೆ 74 ರನ್ಗಳ ಮೊತ್ತವನ್ನು ತಂಡಕ್ಕೆ ನೀಡಿದರು. ಆದರೆ ನಿರೀಕ್ಷಿತ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಎಬಿ ಡೀ ವಿಲಿಯರ್ಸ್ ಅವರ ಆಟ ಇಂದು ನಿರಾಸೆ ಮೂಡಿಸಿದ್ದಂತೂ ಸತ್ಯ. ಕೊಹ್ಲಿ 14 ಎಸೆತಗಳಿಗೆ ಕೇವಲ 9 ರನ್ ಗಳಿಸಿದರೆ, ಎಬಿ ಡೀ 12 ಎಸೆತಗಳಿಗೆ 15 ರನ್ ಗಳಿಸಿದರು. ಆರ್ಸಿಬಿ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಕೆ ಮಾಡಿತು.
ಎಮ್ಐ ತಂಡ ಆರ್ಸಿಬಿ ನೀಡಿದ ಗುರಿಯನ್ನು ಸುಲಭವಾಗಿ ಪೂರೈಸಿತು. ಎಮ್ಐ ತಂಡದಿಂದ ಆರಂಭಿಕ ಆಟಗಾರರಾಗಿ ಡಿ. ಕಾಕ್ ಹಾಗೂ ಎಸ್. ಕಿಶನ್ ಮೈದಾನಕ್ಕಿಳಿದರು. ಕಾಕ್ 19 ಎಸೆತಗಳಿಗೆ 18 ರನ್ ಹಾಗೂ ಕಿಶನ್ 19 ಎಸೆತಗಳಿಗೆ 25 ರನ್ ಗಳಿಕೆ ಮಾಡಿದರು. ನಂತರ ಬಂದ ಎಸ್. ಯಾದವ್ ತಂಡದ ಗೆಲುವಿನಲ್ಲಿ ಮಹತ್ವದ ಭಾಗಿಯಾದರು. ಯಾದವ್ 43 ಎಸೆತಗಳಿಗೆ 79 ರನ್ಗಳ ಬೃಹತ್ ಮೊತ್ತವನ್ನು ತಂಡಕ್ಕೆ ನೀಡಿದರು. ಎಮ್ಐ ತಂಡ 19.1 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿ ಪಂದ್ಯದಲ್ಲಿ ಗೆಲುವಿನ ಗರಿಯನ್ನು ತನ್ನದಾಗಿಸಿಕೊಂಡಿತು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment