Trending

ಆರ್‌ಸಿಬಿಯನ್ನು ಮಣಿಸಿದ ಸಿಎಸ್‌ಕೆ

ಐಪಿಎಲ್ 20-20ಯ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಆಫ್ ಬೆಂಗಳೂರು ತಂಡದ ವಿರುದ್ಧ, ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ವಿಕೆಟ್‌ಗಳ ವಿಜಯ ಸಾಧಿಸಿತು.

ದುಬೈನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

ಆರ್‌ಸಿಬಿ ತಂಡದಿಂದ ಆರಂಭಿಕ ಬ್ಯಾಟ್ಸ್‌ಮನ್‌ ‌ಗಳಾಗಿ ಪಡಿಕ್ಕಲ್ ಹಾಗೂ ಫಿಂಚ್ ಫೀಲ್ಡಿಗಿಳಿದರು. ಆದರೆ ಇಂದು ಏಕೋ ಆರ್‌ಸಿಬಿ ಆಟದಲ್ಲಿನ ತನ್ನ ಹಿಡಿತವನ್ನು ಕಳೆದುಕೊಂಡಿತ್ತು. ಪಡಿಕ್ಕಲ್ 21 ಎಸೆತಗಳಿಗೆ 22 ರನ್ ಮತ್ತು ಫಿಂಚ್ 11 ಎಸೆತಗಳಿಗೆ 15 ರನ್ ಗಳಿಕೆ‌ ಮಾಡಿದರು. ನಂತರ ಬಂದ ವಿರಾಟ್ ಕೊಹ್ಲಿ 43 ಎಸೆತಗಳಿಗೆ 50 ರನ್ ಹಾಗೂ ಎಬಿಡೀ ವಿಲಿಯರ್ಸ್ 36 ಎಸೆತಗಳಿಗೆ 39 ರನ್ ಗಳಿಸಿದರೂ ತಂಡ ಪಂದ್ಯದಲ್ಲಿ‌‌ ಪರಾಜಿತಗೊಳ್ಳಲೇಬೇಕಾಯಿತು. ಆರ್‌ಸಿಬಿ ತಂಡ‌ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 145 ರನ್‌‌ ಗಳಿಸಿತು.

ಇತ್ತ ಸಿಎಸ್‌ಕೆ ತಂಡದಿಂದ ಆರ್. ಗಾಯಕ್ವಾಡ್ ಹಾಗೂ ಫಾಫ್ ಡು‌ ಪ್ಲೆಸ್ಸಿಸ್ ಉತ್ತಮ ಆರಂಭ ನೀಡಿದರು. ಗಾಯಕ್ವಾಡ್ 51 ಎಸೆತಗಳಿಗೆ 65 ರನ್ ಹಾಗೂ ಪ್ಲೆಸ್ಸಿಸ್ 13 ಎಸೆತಗಳಿಗೆ 25 ರನ್ ಗಳಿಸಿದರು. ನಂತರ ಬಂದ ಅಂಬಾಟಿ‌ ರಾಯುಡು 27 ಎಸೆತಗಳಿಗೆ 39 ರನ್‌ಗಳ ಮೊತ್ತವನ್ನು ತಂಡಕ್ಕೆ ನೀಡಿದರು. ಸಿಎಸ್‌ಕೆ ತಂಡ 18.4 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿ ಪಂದ್ಯದಲ್ಲಿ ವಿಜಯಿಯಾಯಿತು.

Team Newsnap
Leave a Comment
Share
Published by
Team Newsnap
Tags: #CSK#IPL#rcb

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024