ತೀವ್ರ ಹೃದಯಾಘಾತದಿಂದ Radio jackie ರಚನಾ (39) ಇಂದು ನಿಧನರಾದರು.
ರಚನಾಳ ಅಂಗಾಂಗಗಳನ್ನು ದಾನ ಮಾಡಲು ಅವರ ಕುಟುಂಬ ನಿರ್ಧರಿಸಿದೆ. ಈ ಮೂಲಕ ಸಾವಿನಲ್ಲೂ ರಚನಾ ಕುಟುಂಬ ಸಾರ್ಥಕತೆ ಮೆರೆದಿದೆ.
ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಬೆಳಗ್ಗೆ ರಚನಾ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.
ರೇಡಿಯೋ ಮಿರ್ಚಿ, ರೇಡಿಯೋ ಸಿಟಿ ಸೇರಿದಂತೆ ಹಲವು ರೇಡಿಯೋ ವಾಹಿನಿಗಳಲ್ಲಿ ಕೆಲಸ ಮಾಡಿದ್ದ ಅವರು, ತಮ್ಮದೇ ವಿಶೇಷ ಶೈಲಿಯ ಮಾತಿನಿಂದ ಅಪಾರ ಕೇಳುಗರನ್ನು ಪಡೆದಿದ್ದರು.
ರಚನಾ ಕಾರ್ಯಕ್ರಮಗಳನ್ನು ಕೇಳಲು ಕೇಳುಗರ ವರ್ಗವೇ ಸೃಷ್ಟಿಯಾಗಿತ್ತು. ಅದರಲ್ಲೂ ಸ್ಯಾಂಡಲ್ ವುಡ್ ನ ಅನೇಕ ಸ್ಟಾರ್ ನಟರು ರಚನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ತುದಿಗಾಲಲ್ಲಿ ನಿಲ್ಲುತ್ತಿದ್ದರು.
ಮೂರು ವಷ೯ಗಳಿಂದ ಆರ್ ಜೆ ಕೆಲಸ ನಿಲ್ಲಿಸಿದ್ದರು. ಕಳೆದ ಕೆಲ ವರ್ಷಗಳಿಂದ ರಚನಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಅಲ್ಲದೇ ಹೆಚ್ಚು ಜನರ ಜತೆ ಬೆರೆಯುತ್ತಿರಲಿಲ್ಲ ಎನ್ನುತ್ತಾರೆ ಅವರ ಸ್ನೇಹಿತರು. ಅತೀ ಚಿಕ್ಕ ವಯಸ್ಸಿನಲ್ಲೇ ರಚನಾ ಹೃದಯಾಘಾತದಿಂದ ನಿಧನರಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು