ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ರದ್ದು ಮಾಡಲಾಗಿದ್ದ ಅಮರನಾಥ ಯಾತ್ರೆಗೆ ಈ ವರ್ಷ ಚಾಲನೆ ನೀಡಲಾಗುವುದು.
ಏಪ್ರಿಲ್ 11 ರಿಂದ ಅಮರನಾಥ ಯಾತ್ರೆಗೆ ಭಕ್ತಾದಿಗಳು ನೋಂದಣಿ ಮಾಡಿಕೊಳ್ಳಬಹುದು ಎಂದು ಅಮರನಾಥಜೀ ಪುಣ್ಯ ಕ್ಷೇತ್ರದ ಸಿಇಓ ನಿತೀಶ್ವರ್ ಕುಮಾರ್ ತಿಳಿಸಿದ್ದಾರೆ.
ಜೂನ್ 30 ರಿಂದ ಆಗಸ್ಟ್ 11ರ ವರೆಗೂ ಯಾತ್ರೆ ನಡೆಸಲು ತೀರ್ಮಾನ ಮಾಡಲಾಗಿದೆ.
ಯಾತ್ರೆ ಕೈಗೊಳ್ಳುವ ಭಕ್ತಾದಿಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಶ್ರೈನ್ ಬೋರ್ಡ್ನ ವೆಬ್ಸೈಟ್ ಅಥವಾ ಮೂಬೈಲ್ ಅಪ್ಲಿಕೇಶನ್ ಮೂಲಕ ನೋಂದಣಿ ಮಾಡಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ವರ್ಷ ಮೂರು ಲಕ್ಷ ಜನರು ಯಾತ್ರೆ ಮಾಡುವ ನಿರೀಕ್ಷೆಗಳಿದೆ. ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ 3,000 ಜನರು ಉಳಿದುಕೊಳ್ಳಲು ವ್ಯವಸ್ಥೆ ಇರುವ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗಿದೆ. ಅಲ್ಲಿ ಭಕ್ತಾಧಿಗಳು ತಂಗಲು ಅವಕಾಶ ಮಾಡಿಕೊಡಲಾಗಿದೆ.