ನಾನು ಮತ್ತು ಅನಂತರಾಜು ಇಬ್ಬರೂ 6 ವರ್ಷದಿಂದ ಲಿವ್ ಇನ್ ರಿಲೇಶನ್ಶಿಪ್ನಲ್ಲಿ ಇದ್ದೆ, ಹನಿಟ್ರ್ಯಾಪ್ ಮಾಡಿಲ್ಲ, ನಿಜ ನಾನು ತಪ್ಪು ಮಾಡಿದೆ. ಅವರ ಸಾವಿಗೆ ನಾನು ಕಾರಣ ಅಲ್ಲ, ನಾನು ಆತ್ಮಹತ್ಯೆಗೆ ಪ್ರಚೋದನೆ ನೀಡಿಲ್ಲ.
- ಇದು ಬ್ಯಾಡರಹಳ್ಳಿ ಬಿಜೆಪಿ ಮುಖಂಡ ಅನಂತರಾಜು ಗೆಳತಿ ರೇಖಾ ಪೋಲಿಸ್ ಠಾಣೆ ಮುಂದೆ ಮಾಧ್ಯಮದವರ ಜೊತೆ ತಮ್ಮ ಅಳಲು ತೋಡಿಕೊಂಡರು
ಪತ್ನಿ ಸುಮಾ ಕೊಟ್ಟ ಟಾರ್ಚರ್ಗೆ ಅನಂತರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನಗೆ ನ್ಯಾಯ ಬೇಕು. ನನ್ನಲ್ಲಿರುವ ಎಲ್ಲಾ ಆಡಿಯೋವನ್ನೂ ಪೊಲೀಸರಿಗೆ ಕೊಟ್ಟಿದ್ದೇನೆ. ನನಗೆ ಮತ್ತು ನನ್ನ ಮಕ್ಕಳಿಗೆ ಜೀವ ಬೆದರಿಕೆ ಇದೆ… ಪ್ಲೀಸ್ ನನಗೆ ನ್ಯಾಯ ಕೊಡಿಸಿ… ಎಂದಿದ್ದಾರೆ ಪ್ರೇಯಸಿ ರೇಖಾ
ಇದನ್ನು ಓದಿ –ಗಂಡ, ಮಾವ, ಅತ್ತೆ ಕಿರುಕುಳವೇ ಸ್ಫೂರ್ತಿ; IAS ಪಾಸ್ ಮಾಡಿದ 7 ವರ್ಷದ ಮಗುವಿನ ತಾಯಿ
ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಅನಂತರಾಜು, ಮೇ 12ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಅನಂತರಾಜು ಆತ್ಮಹತ್ಯೆ ಮಾಡಿಕೊಂಡದ್ದು ತುಂಬಾ ನೋವು ತಂದಿದೆ. ನಾನು ಹನಿಟ್ರ್ಯಾಪ್ ಮಾಡಿಲ್ಲ, ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ. ಸುಮಾಳ ಕಿರುಕುಳದಿಂದಲೇ ಅನಂತರಾಜು ಆತ್ಮಹತ್ಯೆ ಮಾಡಿಕೊಂಡಿರೋದು. ಅನಂತರಾಜು ಈ ಹಿಂದೆ ಒಂದು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ರು. ಆ ವೇಳೆ ಅವರಿಂದ ಸುಮಾ ಬಲವಂತವಾಗಿ ಡೆತ್ನೋಟ್ ಬರೆಸಿಕೊಂಡಿದ್ದಾರೆ.
ನಾನು ಸಾಮಾನ್ಯ ಮಹಿಳೆ. ನನಗೆ ದಿನೇದಿನೆ ಕಿರುಕುಳ ಹೆಚ್ಚಾಗ್ತಿದೆ. ನಾನು ತಪ್ಪು ಮಾಡಿಲ್ಲ, ಯಾವುದೇ ತನಿಖೆಗೂ ನಾನು ಸಿದ್ಧ. ಸುಮಾ ವಿರುದ್ದ ದೂರು ನೀಡುತ್ತೇನೆ. ಸಿಎಂ ಮತ್ತು ಗೃಹ ಸಚಿವರು ನನಗೆ ನ್ಯಾಯ ಕೊಡಿಸಬೇಕು. ನನ್ನಲ್ಲಿರುವ ಎಲ್ಲ ಆಡಿಯೋಗಳನ್ನು ಪೊಲೀಸರಿಗೆ ಕೊಟ್ಟಿದ್ದೇನೆ ಎಂದರು.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
- ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
More Stories
ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್