ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ರೇಖಾ ಕದೀರೇಶ್ ಹತ್ಯೆ ಪ್ರಕರಣ ಸಂಬಂಧ ಕೊಲೆಗೆ ಸಹಕಾರ ನೀಡಿ ಹಾಗೂ ಸಂಚು ರೂಪಿಸಿದ್ದ ಕಾರಣ ನಾಲ್ವರನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ, ವಿಚಾರಣೆ ನಡೆಸುತ್ತಿದ್ದಾರೆ.
ರೇಖಾ ಕದೀರೇಶ್ ಅವರ ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ಕದೀರೇಶ್ ಮರಣದ ನಂತರ ಕದೀರೇಶ್ ಕುಟುಂಬಸ್ಥರು ಸಾಕಷ್ಟು ನೋವು ಅನುಭವಿಸಿದ್ದರು.
ಕದೀರೇಶ್ ಸಂಪಾದನೆ ಮಾಡಿದ್ದ ಆಸ್ತಿ ರಾಜಕೀಯ ಪವರ್ ಎಲ್ಲವೂ ಕದಿರೇಶ್ ಪತ್ನಿ ರೇಖಾಗೆ ಸಿಕ್ಕಿತ್ತು. ಪವರ್ ಸಿಕ್ಕ ಬಳಿಕ ರೇಖಾ ಕದೀರೇಶ್ ಕುಟುಂಬವನ್ನು ಬಿಟ್ಟು ಒಬ್ಬಂಟಿಯಾಗಿದ್ದರು. ಇದು ಕೊಲೆಗೆ ಕಾರಣ ಎನ್ನಲಾಗಿದೆ.