Main News

ಸನ್ನಡತೆ ಆಧಾರ : 84 ಕೈದಿಗಳ ಬಿಡುಗಡೆ : ಸಚಿವ ಅರಗ ಜ್ಞಾನೇಂದ್ರ

ಸನ್ನಡತೆ ಆಧಾರದ ಮೇಲೆ ಸ್ವಾತಂತ್ರ್ಯ ದಿನದ ಅಂಗವಾಗಿ 84 ಕೈದಿಗಳನ್ನು ಬಿಡುಗಡೆ ಮಾಡಲಾಗುವುದು.ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ತಿಳಿಸಿದ್ದಾರೆ.

ಜೈಲಲ್ಲಿ ಅಕ್ರಮಗಳ ಕುರಿತು ಇಂದು ಮಾತನಾಡಿದ ಅವರು, ಜೈಲುಗಳಲ್ಲಿ ಗಾಂಜಾ ಪೂರೈಕೆ, ಅಕ್ರಮ ನಡೆಯದಂತೆ ಬಿಗಿ ಕ್ರಮಕೈಗೊಳ್ಳಲಾಗಿದೆ.ಮುರುಗನ್ ಸಮಿತಿ ವರದಿ ಆಧಾರದಲ್ಲಿ ಪರಪ್ಪನ ಅಗ್ರಹಾರದಲ್ಲಿ 15 ಸಿಬ್ಬಂದಿ ಅಮಾನತು ಮಾಡಲಾಗಿದೆ. 30 ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ಬಹುತೇಕ ಹೊಸ ಸಿಬ್ಬಂದಿಗಳು ಇದ್ದಾರೆ. ಜೈಲು ಸಿಬ್ಬಂದಿ ಅಲರ್ಟ್ ಆಗಿದ್ದಾರೆ, ಎಲ್ಲವನ್ನು ಹಿಡಿಯುತ್ತಿದ್ದಾರೆ ಎಂದು ತಿಳಿಸಿದರು.ಇದನ್ನು ಓದಿ –ಕಿರ್ಗಿಸ್ತಾನ್ ಟ್ರೆಕ್ : ಪ್ರವಾಸಿಗರ ಕಡೆಗೆ ಹಿಮಪಾತದ ಅದ್ಭುತ ಕ್ಷಣ: ಕ್ಯಾಮರಾದಲ್ಲಿ ಸೆರೆ

ಆಜಾದಿ ಕಾ ಅಮೃತ ಮಹೋತ್ಸವ ದಿನದ ಅಂಗವಾಗಿ ನಮ್ಮ‌ 1 ಲಕ್ಷದ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ತಿರಂಗ ಹಾರಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವರು ತಿಳಿಸಿದ್ದಾರೆ.

ಪಿಎಸ್‌ಐ ಅಕ್ರಮದ ತನಿಖೆಯನ್ನು ಅತ್ಯಂತ ಗಂಭೀರವಾಗಿ ತನಿಖೆ ಮಾಡಿಸುತ್ತಿದ್ದೇವೆ. ಸಿಐಡಿಗೆ ಯಾವುದೇ ಒತ್ತಡ ಕೊಟ್ಟಿಲ್ಲ ಅವರಿಗೆ ನಾವು ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಇಡೀ ದೇಶದಲ್ಲೇ ಮೊದಲು ತಪ್ಪಿತಸ್ಥ ಐಪಿಎಸ್ ಅಧಿಕಾರಿಯನ್ನು ಬಂಧಿಸಿದ್ದೇವೆ. ಆದರೆ ಇದರಲ್ಲಿ ಯಾರೇ ಆದರೂ ರಾಜಕೀಯ ಲಾಭ ಪಡೆದುಕೊಳ್ಳಬಾರದು ಎಂದರು.

ಸಮಯ ಬಂದಾಗ ಯಾವುದೇ ಇತರ ಪ್ರಕರಣದ ತನಿಖೆ ಮಾಡುವುದು ತಪ್ಪಲ್ಲ. ನಮ್ಮ ಕಣ್ಣ ಮುಂದೆ ಇರುವುದು ಸದ್ಯ ಪಿಎಸ್ ಐ ಹಗರಣದ ತನಿಖೆ. ಮಧ್ಯವರ್ತಿ, ಹಣ ಕೊಟ್ಟವರ ವಿರುದ್ಧವೂ ಕ್ರಮ ಆಗುತ್ತಿದೆ. ಇನ್ನೊಮ್ಮೆ ಪರೀಕ್ಷೆಯಲ್ಲಿ ಇಂತಹ ಘಟನೆ ಆಗಬಾರದು. ತನಿಖೆ ಆಗುತ್ತಿದೆ, ಯಾವುದೇ ಊಹೆಯ ಮಾತು ಹೇಳಲ್ಲ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024