January 14, 2026

Newsnap Kannada

The World at your finger tips!

politics

ಬಿಜೆಪಿ ಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆ: ಹೈಕೋರ್ಟ್ ತಕ್ಷಣ ಬಿಡುಗಡೆಗೆ ಆದೇಶ

Spread the love

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅಶ್ಲೀಲ ಪದ ಬಳಕೆ ಆರೋಪ ಸಂಬಂಧ ದಾಖಲಾಗಿದ್ದ ಎಫ್‌ಐಆರ್ ಹಿನ್ನೆಲೆಯಲ್ಲಿ ಬಂಧಿತರಾಗಿದ್ದ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಕ್ಷಣ ಬಿಡುಗಡೆಗೆ ಹೈಕೋರ್ಟ್ ಆದೇಶಿಸಿದೆ.

ಬೆಳಗಾವಿಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜಾಮೀನುಗಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಂತರ, ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು.

ಬಂಧನದ ನಂತರ ಸಿ.ಟಿ. ರವಿ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ರಸ್ತೆ ಮಾರ್ಗದ ಮೂಲಕ ಕಾರಿನಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿತ್ತು.

ಇದಕ್ಕೂ ಮುನ್ನ ಸಿ.ಟಿ. ರವಿ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಸಿ.ಟಿ. ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಲು ಆದೇಶ ನೀಡಿದೆ.ಇದನ್ನು ಓದಿ –ಯೂಟ್ಯೂಬ್ ನೋಡಿ ಬೈಕ್ ಕಳವು ತರಬೇತಿ: 13 ಲಕ್ಷ ಮೌಲ್ಯದ 20 ಬೈಕ್‌ಗಳ ಕಳ್ಳತನ

ಈ ಆದೇಶದ ಮೂಲಕ ಸಿ.ಟಿ. ರವಿ ಅವರಿಗೆ ದೊಡ್ಡ ಪರಿಹಾರ ಸಿಕ್ಕಿದ್ದು, ಈ ಪ್ರಕರಣವು ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ಪಡೆದುಕೊಂಡಿದೆ.

error: Content is protected !!