ಬಿಜೆಪಿಯ ರಾಷ್ಟ್ರೀಯ ಮಾಜಿ ವಕ್ತಾರೆ ನುಪೂರ್ ಶರ್ಮಾ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್ಐಆರ್ಗಳ ವಿಚಾರಣೆಯು ದೆಹಲಿಯಲ್ಲಿ ನಡೆಸುವಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ.
ಪ್ರವಾದಿ ಮೊಹಮ್ಮದ್ ಕುರಿತ ಹೇಳಿಕೆಗೆ ಸಂಬಂಧಿಸಿ ದೇಶದ ವಿವಿಧ ಭಾಗಗಳಲ್ಲಿ ನುಪೂರ್ ಶರ್ಮಾ ವಿರುದ್ಧ ಪ್ರಕರಣಗಳು ದಾಖಲಾಗಿವೆ.ಇದನ್ನು ಓದಿ –ಜಿಮ್ನಲ್ಲಿದ್ದಾಗ ಜನಪ್ರಿಯ ಹಾಸ್ಯ ನಟನಿಗೆ ಹೃದಯಾಘಾತ ತುರ್ತು ಚಿಕಿತ್ಸೆ
ಈ ಎಲ್ಲಾ ಪ್ರಕರಣಗಳ ವಿಚಾರಣೆಯನ್ನ ದೆಹಲಿಗೆ ವರ್ಗಾಯಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಜೊತೆಗೆ ಎಫ್ಐಆರ್ ದಾಖಲಾದ ಯಾವುದೇ ರಾಜ್ಯದ ಪೊಲೀಸರು, ತನಿಖೆಯ ಸಮಯದಲ್ಲಿ ಸಲಹೆಗಳನ್ನು ನೀಡಲು ಬಯಸಿದರೆ ಖಂಡಿತವಾಗಿಯೂ ನೀಡಬಹುದು ಎಂದು ಕೋರ್ಟ್ ಹೇಳಿದೆ.
ನುಪೂರ್ ಶರ್ಮಾಗೆ ರಿಲೀಫ್
ಜುಲೈ 19 ರಂದು ನಡೆದ ವಿಚಾರಣೆ ವೇಳೆ ಆಗಸ್ಟ್ 10 ವರೆಗೆ ನುಪೂರ್ ಶರ್ಮಾರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ಹೇಳಿತ್ತು. ಅಲ್ಲದೇ ನೂಪುರ್ ಶರ್ಮಾ ವಿರುದ್ಧ ಬಲವಂತವಾಗಿ ಯಾವುದೇ ಕ್ರಮ ಕೈಗೊಳ್ಳಬಾರದು ಎಂದಿತ್ತು. ‘
ಅವರ ಜೀವಕ್ಕೆ ಅಪಾಯವಿದೆ’ ಎಂದು ವಿಚಾರಣೆ ವೇಳೆ ನೂಪುರ್ ಶರ್ಮಾ ಪರ ವಕೀಲರು ವಾದ ಮಂಡಿಸಿದ್ದರು.
- SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ
- ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು
- ನಾಳೆ ( May 9 ) SSLC ಫಲಿತಾಂಶ ಪ್ರಕಟ
- ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು