ನವೀಕೃತ ಜಲಿಯನ್ ವಾಲಾಬಾಗ್ ಸ್ಮಾರಕನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿದರು.
ದೇಶದ ಸ್ವಾತಂತ್ರ್ಯಕ್ಕೆ ಪ್ರಾಣವನ್ನು ಅರ್ಪಿಸಿದ ಸರ್ದಾರ್ ಉದ್ದಮ್ ಸಿಂಗ್, ಭಗತ್ ಸಿಂಗ್ ಸೇರಿದಂತೆ ಹಲವು ಸ್ವಾತಂತ್ರ್ಯ ಸೇನಾನಿಗಳಿಗೆ ಧೈರ್ಯಕೊಟ್ಟ ಸ್ಥಳವಾಗಿದೆ ಜಲಿಯನ್ ವಾಲಾಬಾಗ್ ಎಂದು ಹೇಳಿದರು.
ಭಾರತವು ಹಲವು ಸವಾಲುಗಳನ್ನು ಮೆಟ್ಟಿ ನಿಂತಿದೆ. ಇತ್ತೀಚೆಗೆ ಆಫ್ಘಾನಿಸ್ತಾನದಲ್ಲಿ ಅಪಾಯದಲ್ಲಿದ್ದ ಭಾರತೀಯರ ರಕ್ಷಣೆಗೆ ಮುಂದಾಗಿದೆ. ಈ ಕೆಲಸ ಇನ್ನೂ ಮುಂದುವರಿಯುತ್ತದೆ. ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾವು ಇದರ ಹಿಂದೆ ಸಾಕಷ್ಟು ಮಹನೀಯರ ತ್ಯಾಗ, ಬಲಿದಾನವಿದೆ ಎಂಬುದನ್ನು ಮರೆಯಬಾರದರು ಎಂದರು.