ಇದನ್ನು ಓದಿ -ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ಪೋಷಕರು – ಮರ್ಯಾದ ಹತ್ಯೆ
ಆರ್ಬಿಐ ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ರೇಪೋ ದರ ಹೆಚ್ಚಿಸಿದಂತಾಗಿದೆ.
ಆರ್ಬಿಐ ಕಳೆದ ಮೇ ತಿಂಗಳಲ್ಲಿ 40 ಬೇಸಿಸ್ ಪಾಯಿಂಟ್ಸ್ ಹೆಚ್ಚಿಸಿತ್ತು. ಇದೀಗ ಮತ್ತೆ 50 ಬೇಸಿಸ್ ಪಾಯಿಂಟ್ಸ್ ಹೆಚ್ಚಿಸಲಾಗಿದೆ
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗವರ್ನರ್ ಶಕ್ತಿಕಾಂತ್ ದಾಸ್ ದೇಶದಲ್ಲಿ ಹಣದುಬ್ಬರ ನಿರಂತರವಾಗಿ ಹೆಚ್ಚುತ್ತಿದೆ ಇದರ ಪರಿಶೀಲನೆ ಅಗತ್ಯವಾಗಿದೆ. ಆರ್ಥಿಕತೆ ಸಂಕಷ್ಟದಲ್ಲಿ ಸಾಲದ ಹರಿವನ್ನು ನಿಯಂತ್ರಿಸುವ ಉದ್ದೇಶದಿಂದ ಆರ್ಬಿಐ ಈ ಕ್ರಮಕ್ಕೆ ಮುಂದಾಗಿದೆ ಎಂದರು
ಕೇಂದ್ರ ಬ್ಯಾಂಕ್ನ ಈ ನಿರ್ಧಾರದಿಂದ ಬ್ಯಾಂಕ್ಗಳಿಂದ ಗ್ರಾಹಕರು ಸಾಲ ಪಡೆಯೋದು ಮತ್ತಷ್ಟು ದುಬಾರಿ ಆಗಲಿದೆ.
ರೆಪೋ ಅಂದ್ರೆ ಆರ್ಬಿಐ ಇತರೆ ಬ್ಯಾಂಕ್ಗಳಿಗೆ ನೀಡುವ ಸಾಲದ ಮೇಲೆ ವಿಧಿಸುವ ದರ. ರೆಪೋ ರೇಟ್ ಹೆಚ್ಚಳವಾದ್ರೆ ಬ್ಯಾಂಕ್ಗಳಲ್ಲಿ ಬಡ್ಡಿ ಕೂಡ ಹೆಚ್ಚಳವಾಗುತ್ತದೆ. ಬ್ಯಾಂಕ್ಗಳು ನೀಡುವ ಸಾಲದ ಮೇಲಿನ ಬಡ್ಡಿ ಹೆಚ್ಚಾಗುತ್ತೆ. ಗೃಹ ಸಾಲ, ವಾಹನ ಸಾಲ ಮುಂತಾದವುಗಳ ಬಡ್ಡಿ ಸಹಜವಾಗಿಯೇ ಹೆಚ್ಚಳವಾಗುತ್ತದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಹಣದುಬ್ಬರವು ಶೇಕಡಾ 6.7ಕ್ಕೆ ಏರಿಕೆಯಾಗುವ ಮುನ್ಸೂಚನೆ ಆರ್ಬಿಐಗೆ ಸಿಕ್ಕಿದೆ.
ಈ ಹಿಂದೆ ಶೇಕಡಾ 5.7 ರಷ್ಟು ಹಣದುಬ್ಬರ ಇರಲಿದೆ ಎಂದು RBI ಅಂದಾಜಿಸಿತ್ತು. ಇದೀಗ ಹಣದುಬ್ಬರ ಮತ್ತಷ್ಟು ಏರಿಕೆಯಾಗುವ ಮನ್ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದೆ.
ವಿತ್ತಿಯ ನೀತಿಯನ್ನು ಪರಿಗಣಿಸುವಾಗ RBI ಚಿಲ್ಲರೆ ಹಣದುಬ್ಬರ ದರವನ್ನು ಪ್ರಮುಖವಾಗಿ ಗಣನೆಗೆ ತೆಗೆದುಕೊಳ್ಳುತ್ತದೆ. ಈ ಚಿಲ್ಲರೆ ಹಣದುಬ್ಬರವು ಏಪ್ರಿಲ್ನಲ್ಲಿ ಶೇ. 7.79 ರಷ್ಟಿತ್ತು. ಇದು ಕಳೆದ 8 ವರ್ಷಗಳಲ್ಲಿಯೇ ಅತ್ಯಧಿಕ ಹಣದುಬ್ಬರವನ್ನ ಎದುರಿಸಿದೆ. ಹೀಗಾಗಿ ಚಿಲ್ಲರೆ ಹಣದುಬ್ಬರವನ್ನು ಶೇ. 2 ರಿಂದ 6% ರ ವ್ಯಾಪ್ತಿಯ ಅಡಿಯಲ್ಲಿ ಇರಿಸುವ ಜವಾಬ್ದಾರಿ RBI ಹೆಗಲಿಗೆ ಬಿದ್ದಿದೆ.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment