ಪ್ರಧಾನಿ ನರೇಂದ್ರ ಮೋದಿಯವರು ಯೋಗದ ಮಹತ್ವದ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಎಲ್ಲರೂ ಯೋಗಾಭ್ಯಾಸಲ್ಲಿ ತೊಡಗಬೇಕು ಎಂಬ ಮನವಿ ಮಾಡಿಕೊಂಡಿದ್ದಾರೆ. ಈ ಸಂದೇಶ ಎಲ್ಲರನ್ನೂ ತಲುಪಬೇಕು ಎಂಬ ನಿಟ್ಟಿನಲ್ಲಿ ಅವರು ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿ ಹಲವು ಭಾಷೆಗಳಲ್ಲಿ ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ – ಮಂಡ್ಯ ಜಿಲ್ಲೆಯಲ್ಲಿ ನಾಳೆಯ ಚುನಾವಣೆಗೆ ಸಕಲ ಸಿದ್ಧತೆ
ಜಗತ್ತು ಅಂತರರಾಷ್ಟ್ರೀಯ ಯೋಗದಿನವನ್ನು ಆಚರಿಸಲಿದೆ. ಯೋಗ ದಿನವನ್ನು ನೀವೆಲ್ಲರೂ ಆಚರಿಸುವಂತೆ ಮತ್ತು ಯೋಗಾಭ್ಯಾಸವನ್ನು ನಿಮ್ಮ ದಿನಚರಿಯ ಭಾಗವನ್ನಾಗಿ ಮಾಡಿಕೊಳ್ಳಿ ಎಂದು ನಾನು ಆಗ್ರಹಿಸುವೆ. ಅದರಿಂದ ಆಗುವ ಲಾಭಗಳು ಹಲವಾರು.. ಎಂದು ಯೋಗ ಇನ್ ಅವರ್ ಡೈಲಿ ಲೈಪ್ ಎಂಬ ವಿಡಿಯೋ ಮೋದಿ ಹಂಚಿಕೊಂಡಿದ್ದಾರೆ.
ಕರ್ನಾಟಕ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ನಾಳೆ ( ಜೂನ್ 13 ರಂದು) ಮತದಾನ ನಡೆಯಲಿರುವ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಜಿಲ್ಲಾ ಆಡಳಿತವು ಸಕಲ ಸಿದ್ದತೆ ಮಾಡಿಕೊಂಡಿದೆ
ಮಂಡ್ಯ ಜಿಲ್ಲೆಯಲ್ಲಿ ಮತದಾರರ ಸಂಖ್ಯೆ :
ಕೆ.ಆರ್.ಪೇಟೆ-3326, ನಾಗಮಂಗಲ-2959, ಪಾಂಡವಪುರ-3705, ಮಂಡ್ಯ-15925, ಮದ್ದೂರು- 10360, ಶ್ರೀರಂಗಪಟ್ಟಣ-3307, ಮಳವಳ್ಳಿ-7720 ಒಟ್ಟು 47,302 ಮತದಾರರು ಇದ್ದಾರೆ
ಮತದಾನ ಎಲ್ಲಿ ?
ಕರ್ನಾಟಕ ದಕ್ಷಿಣ ಪದವೀಧರರ ಚುನಾವಣೆಗೆ ಸಂಬಂಧಿಸಿದಂತೆ ಕೆ.ಆರ್.ಪೇಟೆ-03, ( ಮಿನಿ ವಿಧಾನಸೌಧದ 3 ವಿವಿಧ ಕೊಠಡಿ) ನಾಗಮಂಗಲ-03 ಮಿನಿ ವಿಧಾನಸೌಧದ 3 ವಿವಿಧ ಕೊಠಡಿ), ಪಾಂಡವಪುರ-04 ( ಮಿನಿ ವಿಧಾನಸೌಧದ 1 ಕೊಠಡಿ ಹಾಗೂ ತಾಲ್ಲೂಕು ಕಚೇರಿಯ 3 ವಿವಿಧ ಕೊಠಡಿ)
ಮಂಡ್ಯ-15(ಮಂಡ್ಯ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ 7 ವಿವಿಧ ಕೊಠಡಿ ಹಾಗೂ ಮಂಡ್ಯ ವಿಶ್ವವಿದ್ಯಾಲಯ ವಿಜ್ಞಾನ ವಿಭಾಗದ 8 ಕೊಠಡಿ) ಮದ್ದೂರು-10 ( ಮಿನಿ ವಿಧಾನಸೌಧದ 2 ಕೊಠಡಿ, ತಾಲ್ಲೂಕು ಪಂಚಾಯತ್ ಕಚೇರಿಯ 2 ಕೊಠಡಿ, ಸರ್ಕಾರಿ ಮಹಿಳಾ ಕಾಲೇಜಿನ ಹಳೆ ಕಟ್ಟಡದ 3 ಕೊಠಡಿ ಹಾಗೂ ಸರ್ಕಾರಿ ಮಹಿಳಾ ಕಾಲೇಜಿನ ಹೊಸ ಕಟ್ಟಡದ 3 ಕೊಠಡಿ), ಶ್ರೀರಂಗಪಟ್ಟಣ-03(ಮಿನಿ ವಿಧಾನಸೌಧದ 3 ಕೊಠಡಿ),ಮಳವಳ್ಳಿ-07 (ಮಿನಿ ವಿಧಾನಸೌಧದ 2 ಕೊಠಡಿ ಹಾಗೂ ತಾಲ್ಲೂಕು ಪಂಚಾಯತ್ ಕಚೇರಿಯ ವಿವಿಧ 5 ಕೊಠಡಿ) ಒಟ್ಟು 45 ಮತಕೇಂದ್ರಗಳನ್ನು ಸಿದ್ಧತೆ ಮಾಡಲಾಗಿದೆ.
ಪ್ರತಿ ಮತಗಟ್ಟೆಗೆ ಒಬ್ಬರು ಪ್ರಿಸೈಡಿಂಗ್ ಅಧಿಕಾರಿ, ಹಾಗೂ ಮೂವರು ಪೋಲಿಂಗ್ ಅಧಿಕಾರಿಗಳು, ಒಬ್ಬರು ಮೈಕ್ರೋ ಅಬ್ಸರ್ವರ್ ನೇಮಕಮಾಡಲಾಗಿದೆ , 45 ಮೈಕ್ರೋ ಅಬ್ಸರ್ವರ್, ಪ್ರಿಸೈಡಿಂಗ್ ಅಧಿಕಾರಿಗಳು ಹಾಗೂ ಪೋಲಿಂಗ್ ಅಧಿಕಾರಿಗಳು ಸೇರಿದಂತೆ ಒಟ್ಟು 180 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಪೊಲೀಸ್ ಬಂದೋಬಸ್ತ್ ಗಾಗಿ ಡಿ.ಎಸ್.ಪಿ-4, ಸಿಪಿಐ/ಪಿಐ- 15, ಪಿ.ಎಸ್.ಐ- 20, ಎಎಸ್ಐ- 45, ಸಿ.ಹೆಚ್.ಸಿ/WHC-71, ಸಿ.ಪಿಸಿ/WPC -112 ಸಿಬ್ಬಂದಿ ಹಾಗೂ 9 ಡಿಎಆರ್ ಪಾರ್ಟಿಗಳನ್ನು ನೇಮಕ ಮಾಡಲಾಗಿದೆ.
ಮತದಾನವು ಜೂನ್ 13 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.
ಸರ್ಕಾರಿ ರಜೆ ಯಾರಿಗೆ ?
ದಕ್ಷಿಣ ಪದವೀಧರರ ಕ್ಷೇತ್ರದ ವ್ಯಾಪ್ತಿ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ, ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ, ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ Establishment ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಮತ ಚಲಾಯಿಸಲಿರುವ ಮತದಾರರಿಗೆ ಜೂ.13 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.
ಯೋಗಾಭ್ಯಾಸ ಯೋಗಾಭ್ಯಾಸ
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment