Bengaluru

ಧರ್ಮದಂಗಲ್‍ ಅಭಿಯಾನಕ್ಕೆ ರೋಡ್ ಸೇರ್ಪಡೆ- ಮುಸ್ಲಿಂ ಹೆಸರಿನ ರಸ್ತೆ , ವೃತ್ತ ಬದಲಿಸಲು ಆಗ್ರಹ

ಹಿಜಬ್, ಹಲಾಲ್ ಕಟ್, ಜಟ್ಕಾ ಕಟ್, ಆಜಾನ್, ಮುಸ್ಲಿಂ ವ್ಯಾಪಾರಕ್ಕೆ ನಿರ್ಬಂಧ ಆಯ್ತು ಇದೀಗ ಏರಿಯಾ ರಸ್ತೆಗಳು ವೃತ್ತಗಳಿಗೆ ಇಟ್ಟಿರುವ ಹೆಸರಿಗೂ ಬ್ರೇಕ್ ಹಾಕವಂತೆ ಒತ್ತಡ ಹೇರಲು ಹಿಂದೂ ಸಂಘಟನೆಗಳು ಮುಂದಾಗಿವೆ.

ಬೆಂಗಳೂರಿಗೆ ಯಾವುದೇ ಕೊಡುಗೆ ನೀಡದ ವ್ಯಕ್ತಿಗಳ ಹೆಸರನ್ನು ಬದಲಾಯಿಸುವಂತೆ ಆಂದೋಲನ ಶುರುವಾಗಿದೆ.

ಬೆಂಗಳೂರಿನ ರಸ್ತೆಗಳು, ಏರಿಯಾ ಹೆಸರು ಬದಲಾಯಿಸುವಂತೆ ಬಿಜೆಪಿ ಮುಖಂಡರು ಅಭಿಯಾನ
ಹಿಂದುಯೇತರ ರಸ್ತೆಗಳು, ಏರಿಯಾಗಳ ಹೆಸರು ಬದಲಾಯಿಸುವಂತೆ ಬಿಬಿಎಂಪಿ ಅಯುಕ್ತರಿಗೆ ಪತ್ರ ಬರೆಯಲಾಗಿದೆ.

ನಗರದಲ್ಲಿ ಇರುವ ವಿಕ್ಟೋರಿಯ ರಸ್ತೆ, ಟಿಪ್ಪು ಸುಲ್ತಾನ್ ರಸ್ತೆ, ಟ್ಯಾನಿ ರಸ್ತೆ ಸೇರಿದಂತೆ ಸುಮಾರು 300ರಕ್ಕೂ ಹೆಚ್ಚು ರಸ್ತೆಗಳು ಹಾಗೂ ಬಿಸ್ಮಿಲ್ ನಗರ, ಇಲಿಯಾಸ್ ನಗರ, ಸುಲ್ತಾನ್ ಪಾಳ್ಯ, ಪ್ರೇಜರ್ ಟೌನ್, ಕಾಕ್ಸ್ ಟೌನ ಸೇರಿದಂತೆ ನೂರಾರು ಏರಿಯಾಗಳ ಹೆಸರು ಮರುನಾಮಕಾರಣಕ್ಕೆ ಅಭಿಯಾನ ಆರಂಭವಾಗಿದೆ.

ಬೆಂಗಳೂರಿನ ಟಿಪ್ಪುಸುಲ್ತಾನ್ ರಸ್ತೆಯನ್ನೂ ಮರು ನಾಮಕಾರಣ ಮಾಡುವಂತೆ ಪಾಲಿಕೆ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಬೆಂಗಳೂರಿಗೆ ಹೆಸರು ತಂದ ಗಣ್ಯ ವ್ಯಕ್ತಿಗಳ ಹೆಸರು ನಾಮಕರಣಕ್ಕೆ ಬಿಜೆಪಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎನ್.ಆರ್. ರಮೇಶ್ ಅವರು ಆಯುಕ್ತರ ಬಳಿ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಮುಖ್ಯ ರಸ್ತೆಗಳಲ್ಲಿ ಮುಸ್ಲಿಂ ಹೆಸರು ಬದಲಾವಣೆಗೆ ಸಿದ್ಧತೆ ನಡೆಸಲಾಗುತ್ತಿದೆ. 198 ವಾರ್ಡ್‍ಗಳಲ್ಲಿನ ಮುಸ್ಲಿಂ ರಸ್ತೆಗಳ ಹೆಸರು ಸಂಗ್ರಹ ಮಾಡಲಾಗಿದೆ. ಹಿಂದೂ ಸಂಘಟನೆಗಳು ಆರ್‍ ಟಿ ಐ ಮೂಲಕ ಮಾಹಿತಿ ಕಲೆಹಾಕಿ, 100ಕ್ಕೂ ಹೆಚ್ಚು ರಸ್ತೆಗಳಿಗೆ ಮುಸ್ಲಿಂ ಸಮಾಜ ಸೇವಕರ ಹೆಸರಿದೆ.

ಮುಸ್ಲಿಮರ ಬದಲಿಗೆ ಹಿಂದೂ ಸಾಧಕರ ಹೆಸರಿಡಲು ಒತ್ತಾಯ ಮಾಡಲಾಗುತ್ತಿದ್ದು, ಹೊಸ ಅಭಿಯಾನಕ್ಕೆ ಪಾಲಿಕೆ ಸೊಪ್ಪು ಹಾಕುತ್ತಾ ಸರ್ಕಾರ ಎಂಬುದನ್ನು ಕಾದುನೋಡಬೇಕಿದೆ.

Team Newsnap
Leave a Comment
Share
Published by
Team Newsnap

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024