ಕೋವಿಡ್ ನಿಂದ ಗುಣಮುಖರಾದವರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಕ್ಷಯರೋಗ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೋರಿದರು.
ಆಗಸ್ಟ್ 31 ರವರೆಗೆ ನಡೆಯಲಿರುವ ಕ್ಷಯರೋಗ ಪತ್ತೆ ಆಂದೋಲನಕ್ಕೆ ವಿಧಾನಸೌಧದಲ್ಲಿ ಚಾಲನೆ ನೀಡಿ ಸಚಿವರು ಮಾತನಾಡಿದರು.
ಕೋವಿಡ್ ಸೋಂಕಿನಿಂದ ಗುಣಮುಖರಾದವರಿಗೆ ಕ್ಷಯರೋಗ ಪತ್ತೆ ಮಾಡುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ರಾಜ್ಯದಲ್ಲಿ 28 ಲಕ್ಷಕ್ಕೂ ಹೆಚ್ಚು ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಅವರಲ್ಲಿ ಫಾಲೋ ಅಪ್ ಮಾಡಲಾಗುವುದು. ಕೋವಿಡ್ ಶ್ವಾಸಕೋಶಕ್ಕೆ ಹೆಚ್ಚು ಹಾನಿಯುಂಟುಮಾಡುತ್ತದೆ. ಕ್ಷಯ ರೋಗ ಕೂಡ ಶ್ವಾಸಕ್ಕೋಶಕ್ಕೆ ಹಾನಿ ಮಾಡುತ್ತದೆ. ಕ್ಷಯ ನಿಯಂತ್ರಣಕ್ಕಾಗಿ ಈ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
2017 ರಿಂದ ಆರಂಭಿಸಿ 75 ಲಕ್ಷ ಜನರನ್ನು ಗುರುತಿಸಿ, 88% ಜನರಿಗೆ ಪರೀಕ್ಷೆ ಮಾಡಲಾಗಿದೆ. 3.9% ಜನರಲ್ಲಿ ಕ್ಷಯ ಪತ್ತೆಯಾಗಿದೆ. ಅದೇ ರೀತಿ 2019, 2020 ರಲ್ಲೂ ಮಾಡಲಾಗಿದೆ. ಕೋವಿಡ್ ನಿಂದಾಗಿ ಕ್ಷಯರೋಗ ಪತ್ತೆ ಪರೀಕ್ಷೆ ಕಡಿಮೆಯಾಗಿದೆ. 2025 ರ ವೇಳೆಗೆ ಕ್ಷಯರೋಗ ಮುಕ್ತ ಮಾಡುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ ಎಂದರು.
ಕೋವಿಡ್ 3 ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ಅಭಿಪ್ರಾಯ ಹಿನ್ನೆಲೆಯಲ್ಲಿ, ಹೊಸ ಕಾರ್ಯಕ್ರಮ ರೂಪಿಸಲಾಗಿದೆ. ರಾಜ್ಯದಲ್ಲಿ ಒಂದೂವರೆ ಕೋಟಿ ಮಕ್ಕಳಿದ್ದು, ಎಲ್ಲರಿಗೂ ಆರೋಗ್ಯ ತಪಾಸಣೆ ಕಾರ್ಯಕ್ರಮ ‘ಆರೋಗ್ಯ ನಂದನ’ಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದರು.ನ
ಈ ಯೋಜನೆಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳನ್ನು ಗುರುತಿಸಿ, ಪೌಷ್ಠಿಕ ಆಹಾರ ನೀಡಲಾಗುವುದು. ಮುನ್ನೆಚ್ಚರಿಕೆ ಕ್ರಮ ವಹಿಸಿ ಮಕ್ಕಳ ಆರೋಗ್ಯ ಸುಧಾರಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment