Mandya

ಕಾರ್ಮೆಲ್ ಕಾನ್ವೆಂಟ್ ನ ನಿವೃತ್ತ ದೈಹಿಕ ಶಿಕ್ಷಕ ವಿನ್ಸೆಂಟ್ ಇನ್ನಿಲ್ಲ

ನಗರದ ಕಾರ್ಮೆಲ್ ಕಾನ್ವೆಂಟ್ ನ ನಿವೃತ್ತ ದೈಹಿಕ ಶಿಕ್ಷಕ ವಿನ್ಸೆಂಟ್ ಮಾಸ್ಟರ್ (77) ಕಳೆದ ಮಧ್ಯ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು,ವಯೋಸಹಜ ಖಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ವಿನ್ಸೆಂಟ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

ಪತ್ನಿ ಹಾಗೂ ಮೂವರು ಪುತ್ರಿಯರೂ ಸೇರಿದಂತೆ ಅಪಾರ ಬಂಧು – ಬಳಗ ಹಾಗೂ ಸ್ನೇಹಿತರನ್ನು ಅಗಲಿದ್ದಾರೆ.

ಮೂಲತಃ ಕೋಲಾರ ಜಿಲ್ಲೆಯವರಾದ ವಿನ್ಸೆಂಟ್ 1964 ರ ಸುಮಾರಿಗೆ ಮಂಡ್ಯಕ್ಕೆ ಬಂದರು, ಮೊದಲು ಮಂಡ್ಯದ ಸೆಂಟ್ ಜೋಸೆಪ್ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಆರಂಭಿಸಿ ನಂತರ ದಿನಗಳಲ್ಲಿ ಕಾರ್ಮೆಲ್ ಕಾನ್ವೆಂಟ್ ಶಾಲೆಯಲ್ಲಿ ಮೂರು ದಶಕಗಳ ಕಾಲ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿದರು.

ತಮ್ಮ ವೃತ್ತಿಯ ಜೊತೆಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿ ಸದಾ ತಮ್ಮನ್ನು ತೊಡಗಿಸಿಕೊಂಡಿದ್ದ ವಿನ್ಸೆಂಟ್ ಮಾಸ್ಟರ್ ನಿಧನದಿಂದ ಕುಟುಂಬಕ್ಕೆ ಮಾತ್ರವಲ್ಲ ಸಮಾಜಕ್ಕೂ ಕೂಡ ಬಹುದೊಡ್ಡ ನಷ್ಟವೇ ಆಗಿದೆ.

ಮಂಡ್ಯದಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾರ್ಯಕ್ರಮ ನಿರೂಪಣೆಯ ದನಿಯಾಗಿ ಕಾರ್ಯಕ್ರಮದ ಯಶಸ್ಸಿಗೆ ಸಿರಿಕಂಠವಾಗಿದ್ದ, ನಿತ್ಯನಿರಂತರ ಆರಕ್ಷಕ ಇಲಾಖೆಯ ಸೇವೆಗೆ ನಿಸ್ವಾರ್ಥ ಸ್ವಯಂಸೇವೆಯ ಟ್ರಾಫಿಕ್ ವಾರ್ಡನ್ ಆಗಿ ತೊಡಗಿಸಿಕೊಂಡಿದ್ದ ಎಲ್ಲರಿಗೆ ಬೇಕಾದ ಸೇವಾಬಂಧುವಾಗಿದ್ದರು. ವಿನ್ಸೆಂಟ್ ಅವರು ಕಾರ್ಮೆಲ್ ಕಾನ್ವೆಂಟ್ ಶಾಲೆಯ ಬೆಳವಣಿಗೆಯ ಮೂಲಬೇರುಗಳಲ್ಲಿ ಒಬ್ಬರಾಗಿದ್ದರೆಂಬುದನ್ನು ಮರೆಯುವಂತಿಲ್ಲ.

ಸಂತಾಪ

ವಿನ್ಸೆಂಟ್ ನಿಧನದಿಂದ ಸಮಾಜಕ್ಕೂ ಅಪಾರ ನಷ್ಟ ಉಂಟಾಗಿದೆ ಎಂದು ಶೋಕಿಸಿರುವ ನಿವೃತ್ತ ಶಿಕ್ಷಕ ಕೊಕ್ಕಡ ವೆಂಕಟರಮಣ ಭಟ್ ಕುಟುಂಬವರ್ಗದವರಿಗೆ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಆತ್ಮಶಕ್ತಿಯನ್ನು ಭಗವಂತನು ಹೆಚ್ಚಿಸಲಿ ಎಂದು ಕೋರಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024