crime

ಮಗಳ‌ ಬಂಧನದ ಪ್ರತೀಕಾರ: ಹಳೇ ವಿಡಿಯೋ ತಾಯಿಯಿಂದಲೇ ವೈರಲ್- ಬಂಧನ !

ಕರ್ನಾಟಕ ಪೊಲೀಸರ ವಿರುದ್ದ ಸುಳ್ಳು ಸುದ್ದಿಯ ವಿಡಿಯೋ ಹರಿಬಿಟ್ಟು, ಪೊಲೀಸ್​ ಇಲಾಖೆಗೆ ಮಸಿ ಬಳಿಯಲು ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತೆಯನ್ನು ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಪದ್ಮಾ ಹರೀಶ್ ಬಂಧಿತ ಕಾಂಗ್ರೆಸ್ ಕಾರ್ಯಕರ್ತೆ. 2019 ರಲ್ಲಿ ಬೆಂಗಳೂರಿನಲ್ಲಿ ನಡೆದ ರೌಡಿಶೀಟರ್ ಲಕ್ಷ್ಮಣ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ವರ್ಷಿಣಿ ತಾಯಿಯೇ ಈ ಪದ್ಮಾ ಹರೀಶ್. ಸದ್ಯ ಮಗಳು ಜಾಮೀನು
ಮೇರೆಗೆ ಹೊರಗಿದ್ದರೆ ತಾಯಿ ಈಗ ಜೈಲು ಸೇರಲಿದ್ದಾಳೆ‌.

ಪೋಲಿಸರ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಹೀಗೆ ಮಾಡಿರುವುದಾಗಿ ವಿಚಾರಣೆ ವೇಳೆ ಹೇಳಿದ್ದಾಳೆ.

ಉದ್ದೇಶ ಪೂರ್ವಕವಾಗಿಯೇ ಮುಂಬೈನ ಹಳೆ ವಿಡಿಯೋಗೆ ಹಿನ್ನೆಲೆ ಧ್ವನಿ ಸೇರಿಸಿ ಫೇಸ್ ಬುಕ್ ಗೆ ಹರಿಬಿಟ್ಟಿರುವ ಹಿಂದೆ ಬಲವಾದ ಕಾರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ‌.

ಮುಂಬಯಿ ವಿಡಿಯೋ ಈಗ ವೈರಲ್:

ಕೆಲವು ದಿನಗಳ ಹಿಂದೆ ಪೊಲೀಸರು ವ್ಯಕ್ತಿಯೊಬ್ಬನನ್ನು ಹಿಗ್ಗಾಮುಗ್ಗ ಥಳಿಸುತ್ತಿರುವ ದೃಶ್ಯ ಎಲ್ಲೆಡೆ ವೈರಲ್ ಆಗಿದ್ದು, ಈ ವಿಡಿಯೋ ಕರ್ನಾಟಕದಲ್ಲಿ ಆಗಿದ್ದು, ಕರ್ನಾಟಕದ ಪೊಲೀಸರು ಇಂಥ ಕೃತ್ಯ ಎಸಗಿದ್ದಾರೆ ಎಂದು ಕ್ಯಾಪ್ಷನ್‌ ನೀಡಿ ವೈರಲ್‌ ಆಗುತ್ತಿದೆ. ಅದನ್ನೇ ಸಹಸ್ರಾರು ಮಂದಿ ತಮ್ಮ ಜಾಲತಾಣಗಳಲ್ಲಿ ಶೇರ್‌ ಮಾಡಿಕೊಂಡು ಕರ್ನಾಟಕ ಪೊಲೀಸರನ್ನು ನಿಂದಿಸುತ್ತಿದ್ದಾರೆ.

ಈ ವಿಡಿಯೋ ಸತ್ಯಾಸತ್ಯತೆ ಬಗ್ಗೆ ಪರಿಶೀಲಿಸಿದಾಗ 2020ರ ಏ. 20ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಸ್ಥಳೀಯ ಪೊಲೀಸರು ವ್ಯಕ್ತಿಯೊಬ್ಬರಿಗೆ ಹೊಡೆದಿರುವುದು ಗೊತ್ತಾಗಿತ್ತು.

ಈ ಬಗ್ಗೆ ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಕಂಡುಕೊಂಡು ಆಯುಕ್ತ ಕಮಲ್‌ ಪಂತ್, ಪ್ರಚೋದನೆಗೆ ಕಾರಣವಾಗುವ ಹಾಗೂ ಸುಳ್ಳು‌ ಸುದ್ದಿ ಹಬ್ಬಿಸಿದ್ದ ಕಿಡಿಗೇಡಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಇದರಂತೆ ದಕ್ಷಿಣ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.‌ ಕಮೀಷನರ್ ಸೂಚನೆ ಮೇರೆಗೆ ಸಿಸಿಬಿ ಮಾದಕ ದ್ರವ್ಯ ವಿಭಾಗದ ಇನ್ಸ್​ಪೆಕ್ಟರ್​ ಅಂಜುಮಾಲಾ ನಾಯಕ್ ಹಾಗೂ‌ ಯಲಹಂಕ‌ ಠಾಣೆಯ ಇನ್ಸ್​ಪೆಕ್ಟರ್​ ಸತ್ಯನಾರಾಯಣ್ ನೇತೃತ್ವದಲ್ಲಿ‌‌‌ ಕುಂಬಳಗೋಡು ಸಮೀಪದ ಮಿಲೇನಿಯಂ ಬಿಗ್ರೇಡ್ ಅಪಾರ್ಟ್​ಮೆಂಟ್​ನಲ್ಲಿ ಆರೋಪಿ ಪದ್ಮಾಳನ್ನು ಬಂಧಿಸಿ ನಗರ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಈ ವೇಳೆಗೆ ತಾವೇ ಇದನ್ನು ಮಾಡಿರುವು ದಾಗಿ ಪದ್ಮಾ ತಪ್ಪೊಪ್ಪಿಕೊಂಡಿದ್ದಾರೆ. ಇವರ ಮೂಲಕವೇ ಈ ವಿಡಿಯೋ ಹೋಗಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಲು ಇವರ ಮೊಬೈಲ್ ಅನ್ನು ಪೊಲೀಸರು ಪರಿಶೀಲಿಸಿದ್ದರು.

ಸುದೀರ್ಘ ವಿಚಾರಣೆ ಬಳಿಕ ತಮ್ಮ ತಪ್ಪನ್ನು ಪದ್ಮಾ ಒಪ್ಪಿಕೊಂಡಿದ್ದಾರೆ. ವಿಚಾರಣೆ ವೇಳೆ ಕೊಲೆ ಪ್ರಕರಣದಲ್ಲಿ ಬಂಧಿಸಿದಕ್ಕೆ ಕೋಪಗೊಂಡು ಪೊಲೀಸರಿಗೆ ಅವಮಾನವಾಗುವ ಹಾಗೆ ಹಳೇ ವಿಡಿಯೋಗೆ ಹಿನ್ನೆಲೆ ಧ್ವನಿ ಸೇರಿಸಿ ವೈರಲ್ ಮಾಡಿದೆ ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024