March 10, 2026

Newsnap Kannada

The World at your finger tips!

kolar, lokayukta , SDA

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ

Spread the love

ಮಂಗಳೂರು: 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದು, ಬಂಧನಕ್ಕೊಳಗಾಗಿದ್ದಾರೆ.

ಬಂಧಿತನನ್ನು ಜಿ.ಎಸ್. ದಿನೇಶ್ ಎಂದು ಗುರುತಿಸಲಾಗಿದೆ. ಆಸ್ತಿಯ ಪಹಣಿಯಲ್ಲಿ ಹೆಸರು ಸೇರಿಸಲು 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಅರ್ಜಿದಾರನು ಒಂದು ವರ್ಷದಿಂದ ಸಂಬಂಧಿತ ಅರ್ಜಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಫೈಲ್‌ ಅನ್ನು ಸ್ಥಗಿತಗೊಳಿಸಿದ್ದರು.

ಕಾನೂನುಬದ್ಧವಾಗಿ ನಡೆಸಬೇಕಾದ ಸರ್ಕಾರಿ ಕಾರ್ಯಕ್ಕಾಗಿ ಲಂಚದ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ, ಸಂತ್ರಸ್ತ ವ್ಯಕ್ತಿ ಮಂಗಳೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು.

ಮಂಗಳೂರು ಹೊರವಲಯದ ಸುರತ್ಕಲ್ ಜಂಕ್ಷನ್ ಬಳಿ, 4 ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.ಇದನ್ನು ಓದಿ – ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ

ಕಂದಾಯ ನಿರೀಕ್ಷಕ ದಿನೇಶ್ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ದಾಳಿಯನ್ನು ಲೋಕಾಯುಕ್ತ ಎಸ್‌ಪಿ ನಟರಾಜ್ ಅವರ ನೇತೃತ್ವದಲ್ಲಿ ಕೈಗೊಳ್ಳಲಾಯಿತು.

error: Content is protected !!