ಮಂಡ್ಯದ ಬೆಲ್ಲ ತಯಾರಕರು ತುಂಬಾ ಕಷ್ಟದಲ್ಲಿ ಇದ್ದಾರೆ. ಕೇಂದ್ರದ ಆತ್ಮ ನಿರ್ಭರ ಯೋಜನೆಯಲ್ಲಿ ಆರ್ಥಿಕ ನೆರವು ನೀಡಿ ಸಂಕಷ್ಟ ದಿಂದ ಪಾರು ಮಾಡುವಂತೆ ಸಂಸದೆ ಸುಮಲತಾ ಲೋಕಸಭೆ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆದರು.
ಸಂಸದೆ ಸುಮಲತಾ ತಮಗೆ ಸಿಕ್ಕ 2 ನಿಮಿಷ ಅವಧಿಯಲ್ಲಿ ಮಂಡ್ಯದ ಬೆಲ್ಲ ತಯಾರಕರ ಸಮಸ್ಯೆಗಳನ್ನು ಕುರಿತು ಎಳೆ ಎಳೆಯಾಗಿ ಬಿಚ್ಚಿಟ್ಟರು.
ಆತ್ಮ ನಿರ್ಭರ ಯೋಜನೆಯಲ್ಲಿ
ಒಂದು ಜಿಲ್ಲೆ ಒಂದು ಉತ್ಪನ್ನದ ಮೂಲಕ ಆಯ್ಕೆಯಾದ ಮಂಡ್ಯದ ಫೇಮಸ್ ಬೆಲ್ಲಕ್ಕೆ ಭಾರಿ ಬೇಡಿಕೆ ಇದೆ. ಆದರೆ ಉತ್ಪಾದಕರಿಗೆ ಸರಿಯಾದ ರೀತಿಯಲ್ಲಿ ಪ್ರೋತ್ಸಾಹ, ಆರ್ಥಿಕ ನೆರವು ಸಿಗದೇ ಸಂಕಷ್ಟ ಅನುಭವಿಸುವಂತಾ ಗಿದೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಈ ಹಿಂದೆ 6000 ಬೆಲ್ಲ ಉತ್ಪಾದಕರು ಇದ್ದರು. ಅದರೆ ಈಗ ಕೇವಲ 600 ಮಂದಿ ಉತ್ಪಾದಕರು ಇದ್ದಾರೆ. ಈ ಪ್ರಮಾಣದ ಕುಸಿತಕ್ಕೆ ಸರಿಯಾದ ರೀತಿಯ ಪ್ರೋತ್ಸಾಹ ಸಿಗುತ್ತಿಲ್ಲ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಉತ್ಪಾದಕರ ನೆರವಿಗೆ ಧಾವಿಸುವಂತೆ ಕೋರಿದರು.
ಮಂಡ್ಯದ ಬೆಲ್ಲಕ್ಕೆ ಈಗಿನ ದಿನಗಳಲ್ಲಿ ಬೇಡಿಕೆ ಕಡಮೆಯಾಗುತ್ತಿದೆ. ಕಾರಣ ಗ್ರಾಹಕರನ್ನು ಆಕರ್ಷಿಸಲು ಕೆಲವು ಉತ್ಪಾದಕರು ರಾಸಾಯನಿಕ ವಸ್ತುಗಳ ಮಿಶ್ರಣದಿಂದ ಕಲಬೆರೆಕೆ ಮಾಡಿ ಅಕ್ರಮ ತಯಾರಿಕೆ ಮಾಡುತ್ತಿದ್ದಾರೆ ಎಂಬುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅಲ್ಲದೇ ಸಾವಯವ ಬೆಲ್ಲ ತಯಾರಿಕೆ ಹೆಚ್ಚಿನ ಗಮನ ಹರಿಸುವ ಅನಿವಾರ್ಯತೆಯೂ ಇದೆ ಎಂದರು.
ನಾನು ಹೇಳುವ ಈ ಎಲ್ಸಾ ಸಂಗತಿಗಳು ತುಂಬಾ ಗಂಭೀರವಾಗಿವೆ. ಕೇಂದ್ರ ಸರ್ಕಾರ ಗುಣ ಮಟ್ಟದ ಬೆಲ್ಲ ತಯಾರಿಸಲು ಎಲ್ಲಾ ರೀತಿಯ ನೆರವು ಹಾಗೂ ಆರ್ಥಿಕ ಶಕ್ತಿ ತುಂಬುವಂತೆ ಸುಮಲತಾ ಮನವಿ ಮಾಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ