ಮೈಸೂರು:
‘ಪೆರಿಫೆರಲ್ ವರ್ತುಲ ರಸ್ತೆ’ ನಿರ್ಮಾಣಕ್ಕೆ ಅಗತ್ಯವಾದ ಡಿಪಿಆರ್ (ವಿಸ್ತೃತ ಯೋಜನಾ ವರದಿ)ಯನ್ನು ಸಿದ್ಧಪಡಿಸಲಾಗುತ್ತಿದೆ. 2023ರ ಜನವರಿ ಮೊದಲ ವಾರದಲ್ಲಿ ಟೆಂಡರ್ ಕರೆಯಲಾಗುವುದು ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.ನಟ ಅನಿರುದ್ಧ್ – ಆರೂರು ಜಗದೀಶ್ ವಿವಾದ ಅಂತ್ಯ : ಮತ್ತೆ ಜೊತೆ ಜೊತೆಯಲಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ಸಿಂಹ`ಫೆರಿಫೆರಲ್ ವರ್ತುಲ ರಸ್ತೆ ನಿರ್ಮಿಸುವ ಬಗ್ಗೆ ಹಿಂದಿನಿಂದಲೂ ಪ್ರಸ್ತಾಪಗಳಾಗಿವೆ, ಚರ್ಚೆಯೂ ಆಗಿದೆ. ಆದರೆ, ಯಾವುದೇ ಸ್ಪಷ್ಟ ನಿರ್ಧಾರ ಆಗಿರಲಿಲ್ಲ. ನಾವು 6 ತಿಂಗಳಿಂದ ಈಚೆಗೆ ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ’ ಎಂದರು.
ಕಳೆದ ಜೂನ್ 5ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದ ಮುಡಾದ ಅಂದಿನ ಅಧ್ಯಕ್ಷ ಎಚ್.ವಿ.ರಾಜೀವ್, ಆಯುಕ್ತ ಜಿ.ಟಿ.ದಿನೇಶ್ಕುಮಾರ್ ಅನುದಾನ ಕೋರಿದ್ದರು. ಅನುದಾನ ಒದಗಿಸುವ ಭರವಸೆಯನ್ನು ಅವರು ನೀಡಿದ್ದಾರೆ.
ಡಿಪಿಆರ್ ತಯಾರಿಸುವಾಗ, ಆರೋಗ್ಯ ಕ್ಷೇತ್ರ, ಶಿಕ್ಷಣ, ಕೈಗಾರಿಕೆ ಮೊದಲಾದವುಗಳಿಗೆ ಅನುಕೂಲವಾಗುವಂತೆ ಅಲ್ಲಲ್ಲಿ ಕ್ಲಸ್ಟರ್ಗಳನ್ನು ಮಾಡುವಂತೆಯೂ ಸೂಚಿಸಿದ್ದಾರೆ. ಅದರಂತೆ ಡಿಪಿಆರ್ ವಿನ್ಯಾಸಗೊಳಿಸಲಾಗುತ್ತಿದೆ.
ಎಂದರು
ಶ್ರೀಧರ್ ಸಹಕಾರ ಪಡೆಯಲು ನಿರ್ಧಾರ:
ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೈವೇ ಯೋಜನಾ ನಿರ್ದೇಶಕ ಶ್ರೀಧರ್ ಸಹಕಾರವನ್ನೂ ಮುಡಾ ಅಧಿಕಾರಿಗಳಿಗೆ ಕೊಡಿಸಲಾಗುತ್ತಿದೆ’ ಎಂದು ಮಾಹಿತಿ ಹೇಳಿದರು
102 ಕಿಮಿ ಸುತ್ತಳತೆಯ ರಸ್ತೆ :
ರಸ್ತೆಯು ಈಗಿರುವ ವರ್ತುಲ ರಸ್ತೆಯಿಂದ ಸರಾಸರಿ 5ರಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ಹಾದು ಹೋಗಬಹುದು. ಅದು ಜಾಗದ ಲಭ್ಯತೆಯನ್ನು ಆಧರಿಸಿರಲಿದೆ. ಒಟ್ಟು 102 ಕಿ.ಮೀ. ರಸ್ತೆ ಇರಲಿದೆ. ರಸ್ತೆಗಾಗಿ ಭೂಸ್ವಾಧೀನಕ್ಕಾಗಿ ಹಳ್ಳಿಗಳನ್ನು ಒಕ್ಕಲೆಬ್ಬಿಸಲು ಹೋದರೆ ಜನರು ವಿರೋಧ ಮಾಡುತ್ತಾರೆ. ಊರಿನ ಬಗ್ಗೆ ಜನರಿಗೆ ಭಾವನಾತ್ಮಕ ಸಂಬಂಧವಿರುತ್ತದೆ. ಅದಕ್ಕೆ ಧಕ್ಕೆ ಮಾಡಲಾಗದು. ಆದ್ದರಿಂದ ಹೊಲ-ಗದ್ದೆಗಳಲ್ಲೇ (ಗ್ರೀನ್ ಫೀಲ್ಡ್) ಜಾಗ ಪಡೆಯಬೇಕಾಗುತ್ತದೆ. ಇದರಿಂದ ರೈತರಿಗೂ ಅನುಕೂಲವಾಗಲಿದೆ’ ಎಂದು ಹೇಳಿದರು.
ಟೌನ್ಶಿಪ್ ನಿರ್ಮಣ :
ವರ್ತುಲ ರಸ್ತೆಯಲ್ಲಿ ಅಲ್ಲಲ್ಲಿ ಅಪಘಾತ ವಲಯಗಳು ನಿರ್ಮಾಣವಾಗಿದೆ. ಇದಿಲ್ಲದಂತೆ ಈ ಹೊಸ ರಸ್ತೆ ನಿರ್ಮಿಸಬೇಕಾಗುತ್ತದೆ. ಕೆಳಸೇತುವೆ, ಮೇಲ್ಸೇತುವೆ ಕಟ್ಟಬೇಕಾದ ಅಗತ್ಯ ಬರಬಾರದು. ಕೈಗಾರಿಕೆ ಅಭಿವೃದ್ಧಿಗೂ ಪೂರಕವಾಗಿರುವಂತೆ ಇರಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಮೈಸೂರಿನ ಭವಿಷ್ಯದ ದೃಷ್ಟಿಯಿಂದ ಇದು ಬಹಳ ಮಹತ್ವದ್ದಾಗಿದೆ. ಇಲ್ಲದಿದ್ದರೆ ನಗರವು ಮತ್ತೊಂದು ಬೆಂಗಳೂರು ಆಗಿಬಿಡುತ್ತದೆ. ಈಗಾಗಲೇ 40ರಿಂದ 50 ಎಕರೆ ಜಮೀನು ಕಾಯ್ದಿರಿಸಿ ಟೌನ್ಶಿಪ್ ನಿರ್ಮಾಣಕ್ಕೂ ಯೋಜಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.
ಕ್ಲಸ್ಟರ್ ಗಳ ನಿರ್ಮಾಣ :
ಪೆರಿಫೆರಲ್ ವರ್ತುಲ ರಸ್ತೆ ಅಕ್ಕಪಕ್ಕದಲ್ಲಿ ಕ್ಲಸ್ಟರ್ಗಳನ್ನು ಮಾಡಿದರೆ ಮುಡಾಕ್ಕೆ ವರಮಾನವೂ ಬರುತ್ತದೆ. ಇದೆಲ್ಲವನ್ನೂ ಒಳಗೊಂಡು ಲೋಪದೋಷಗಳು ಇಲ್ಲದಿರುವಂತಹ ಡಿಪಿಆರ್ ಅನ್ನು ತಯಾರಿಸಿ, ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುತ್ತದೆ’ ಎಂದು ವಿವರಿಸಿದರು.
`ಎರಡು ವರ್ಷಗಳಲ್ಲಿ ಕಾಮಗಾರಿ ಆರಂಭಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಮುಡಾ ಅಧಿಕಾರಿಗಳು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ. ಎಷ್ಟು ಮೊತ್ತ ಬೇಕಾಗುತ್ತದೆ ಎನ್ನುವುದು ಡಿಪಿಆರ್ ಸಿದ್ಧಗೊಂಡ ನಂತರ ತಿಳಿಯಲಿದೆ’ ಎಂದರು.
ಮುಡಾ ಆಯುಕ್ತ ಜಿ.ಟಿ.ದಿನೇಶ್ಕುಮಾರ್, ಎಸ್ಇ ಚನ್ನಕೇಶವ, ನಗರ ಯೋಜಕ ಸದಸ್ಯ ಆರ್.ಶೇಷ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಯೋಜನಾ ನಿರ್ದೇಶಕ ಶ್ರೀಧರ್ ಇದ್ದರು.
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
This website uses cookies.
Leave a Comment