ಉಡುಪಿ ಜಿಲ್ಲೆಯ ಮೂಡುತೋನ್ಸೆಯಲ್ಲಿ ನಡೆದ ಹಡಿಲು ಭೂಮಿ ಬೇಸಾಯ ಆಂದೋಲನದಲ್ಲಿ ಪಾಲ್ಗೊಂಡಿದ್ದ ನಟ, ನಿದೇರ್ಶಕ ರಿಷಬ್ ಶೆಟ್ಟಿ, ಭತ್ತದ ಗದ್ದೆಯಲ್ಲಿ ಕಳೆಗಳನ್ನು ತೆಗೆದರು.
ಕೇದಾರೋತ್ಥಾನ ಟ್ರಸ್ಟ್ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ 1500 ಎಕರೆ ಹಡಿಲು ಭೂಮಿ ಬೇಸಾಯ ಮಾಡಲಾಗಿದೆ. ಈ ಗದ್ದೆಗಳಲ್ಲಿ ಪೈರಿನ ಮಧ್ಯೆ ಕಳೆ ಗಿಡಗಳು ಬೆಳೆದಿದ್ದು, ಇವನ್ನು ತೆಗೆಯುವ ಕೆಲಸದಲ್ಲಿ ಉಡುಪಿ ಜಿಲ್ಲಾ ಯುವ ಮೋರ್ಚಾದ ಪದಾಧಿಕಾರಿಗಳು ಸೇವಾ ಮನೋಭಾವನೆಯಿಂದ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಶಾಸಕ ಕೆ. ರಘುಪತಿ ಭಟ್ ನೇತೃತ್ವ ವಹಿಸಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ರಿಶಬ್ಶೆಟ್ಟಿ ಲವಲವಿಕೆಯಿಂದ ಗದ್ದೆಯಲ್ಲಿ ಕಳೆ ಕಿತ್ತರು. ಉಡುಪಿ ಶಾಸಕರು ಮಾದರಿ ಕೆಲಸ ಮಾಡುತ್ತಿದ್ದಾರೆ. ಬೇಸಾಯದಿಂದ ಜನರು ವಿಮುಖರಾಗುತ್ತಿರುವ ಇಂತಹ ಸಂದರ್ಭದಲ್ಲಿ ಈ ರೀತಿಯ ಅಭಿಯಾನಗಳ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಯುವಕರು, ಗ್ರಾಮಸ್ಥರು ತಮ್ಮ ನೆಚ್ಚಿನ ನಟನೊಂದಿಗೆ ಫೋಟೊ ತೆಗೆಸಿಕೊಂಡರು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment