Main News

ಮಂಡ್ಯ ಜಿಲ್ಲೆಯ ಪ್ರವೇಶಕ್ಕೆ ಋಷಿಕುಮಾರ್ , ಮುತಾಲಿಕ್ ಗೆ ಶಾಶ್ವತ ನಿರ್ಬಂಧಕ್ಕೆ ಒತ್ತಾಯ -ಪ್ರಗತಿಪರರ ಪ್ರತಿಭಟನೆ

ಮಂಡ್ಯ – ಕೋಮು ಸೌಹಾರ್ದತೆಯನ್ನು ಕದಡುತ್ತಿರುವ ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಋಷಿಕುಮಾರ ಮತ್ತು ಪ್ರಮೋದ್ ಮುತಾಲಿಕ್ ರಂತಹ ವ್ಯಕ್ತಿಗಳು ಮಂಡ್ಯ ಜಿಲ್ಲೆಗೆ ಬಾರದಂತೆ ಶಾಶ್ವತ ನಿರ್ಬಂಧ ಹೇರಬೇಕು ಎಂದು ಒತ್ತಾಯಿಸಿ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಇದನ್ನು ಓದಿ – ರಾಜ್ಯಾಧ್ಯಂತ ಬೆಳಿಗ್ಗೆ 6 ಗಂಟೆಗೆ ‘ಆಜಾನ್ ಕೂಗಲು’ ಮುಸ್ಲೀಂ ಮುಖಂಡರ ನಿರ್ಧಾರ

ವಿಶ್ವೇಶ್ವರಯ್ಯನವರ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರಗತಿಪರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಾಹಿತಿ ಜಗದೀಶ್ ಕೊಪ್ಪ, ಜಿಲ್ಲೆಯಲ್ಲಿ ಕೋಮುವಾದ ಸೃಷ್ಟಿ ಮಾಡಲು ಕಾಳಿ ಸ್ವಾಮಿ ಮತ್ತು ಮುತಾಲಿಕ್ ಜಿಲ್ಲೆಗೆ ಆಗಮಿಸಿದ್ದಾರೆ. ಅವರ ಆಗಮನದಿಂದ ಜಿಲ್ಲೆಯ ಶಾಂತಿ-ಸುವ್ಯವಸ್ಥೆ ಹದಗೆಡಲಿದೆ ಹೀಗಾಗಿ ಅವರಿಗೆ ಶಾಶ್ವತ ನಿರ್ಬಂಧ ವಿಧಿಸುವಂತೆ ಆಗ್ರಹಿಸಿದರು.

ಇದನ್ನು ಓದಿ – ಪ್ರಿಯಕರನಿಗಾಗಿ ಮನೆಯಲ್ಲಿದ್ದ 1 ಕೆಜಿ ಚಿನ್ನ ಕದ್ದ ಯುವತಿ: ಮಗಳ ಕೃತ್ಯ ಬಯಲಿಗೆಳೆದ ತಾಯಿ

ಪ್ರತಿಭಟನೆಯಲ್ಲಿ ಹುಲ್ಕೆರೆ ಮಹದೇವು, ಗುರುಪ್ರಸಾದ್ ಕೆರಗೋಡು, ಜಿ.ಟಿ.ವೀರಪ್ಪ, ಸುನಂದಾ ಜಯರಾಂ ,ಲಕ್ಷ್ಮಣ್ ಚೀರನಹಳ್ಳಿ, ಕೃಷ್ಣೇಗೌಡ ಟಿ. ಎಲ್, ಟಿ.ಯಶವಂತ್,ಟಿಡಿ ನಾಗರಾಜ್, ಹಾಲಹಳ್ಳಿ ಮುಕುಂದಪ್ಪ, ಎಂ.ವಿ.ಕೃಷ್ಣ ಕುಬೇರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024