ಮಹಾರಾಷ್ಟ್ರದಲ್ಲಿ ವತ್ ಪೂರ್ಣಿಮಾ ಆಚರಣೆ ನಡೆಯಲಿದೆ. ಆ ವೇಳೆ ಮಹಿಳೆಯರು ಆಲದ ಮರಕ್ಕೆ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸುತ್ತಾರೆ. ಮುಂದಿನ ಏಳೇಳು ಜನ್ಮಕ್ಕೂ ಇದೇ ಗಂಡನನ್ನು ಕರುಣಿಸು, ಸಂತೋಷದ ದಾಂಪತ್ಯ ಕೊಡು ಎಂದು ಬೇಡಿಕೊಳ್ಳುತ್ತಾರೆ.
ಆದರೆ ಇಲ್ಲಿ ವಿಶೇಷವಾಗಿ ಪುರುಷರು ಅರಳಿ ಮರಕ್ಕೆ ಸುತ್ತು ಹಾಕಿ ದೇವರೆ ಕೈಮುಗಿದು ಬೇಡುತ್ತೇನೆ, ಮುಂದಿನ ಜನ್ಮದಲ್ಲಿ ಇದೇ ಪತ್ನಿಯನ್ನು ಜೊತೆ ಮಾಡಬೇಡ, ಬದಲಿ ಕೊಡು ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನು ಓದಿ –ರಥ ಉರುಳಿಬಿದ್ದು ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ : ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ : ತಮಿಳುನಾಡು ಸಿಎಂ
ಕೌಟುಂಬಿಕ ದೌರ್ಜನ್ಯದಿಂದ ಬೇಸತ್ತ ಪುರುಷರು ಕೆಲ ವರ್ಷಗಳ ಹಿಂದೆಯೇ ಪತ್ನಿ ಪೀಡಕರ ಸಂಘ ರಚಿಸಿಕೊಂಡಿದ್ದಾರೆ. ವತ್ ಪೂರ್ಣಿಮಾ ವೇಳೆ ಮಹಿಳೆಯರು ಪೂಜೆ ಸಲ್ಲಿಸುವುದಕ್ಕೂ ಮುನ್ನಾ ದಿನ ಪುರುಷರು ಅರಳಿಮರಕ್ಕೆ ಪೂಜೆ ಸಲ್ಲಿಸಿದ್ದಾರೆ. ದಯವಿಟ್ಟು ಮುಂದಿನ ಜನ್ಮದಲ್ಲಿ ಈಕೆಯನ್ನೇ ಹೆಂಡತಿಯಾಗಿ ನೀಡಬೇಡ ಎಂದು ದೇವರನ್ನು ಪ್ರಾರ್ಥಿಸಿದ್ದು, 108 ಪ್ರದಕ್ಷಿಣೆ ಹಾಕಿದ್ದಾರೆ.
ಪತ್ನಿ ಪೀಡಕರ ಆಶ್ರಮದ ಸಂಸ್ಥಾಪಕ ಅಧ್ಯಕ್ಷ ಭರತ್ ಫುಲಾರೆ, ಬಹಳಷ್ಟು ಪುರುಷರು ಮನೆಯಲ್ಲಿ ಹೆದರಿಸುವ ಸಮಸ್ಯೆಗಳು ಭಿನ್ನವಾಗಿರುತ್ತವೆ. ಎಲ್ಲಾ ಕಾನೂನುಗಳು ಮಹಿಳೆಯರ ಸಬಲೀಕರಣಕ್ಕೆ ಕುಮ್ಮಕ್ಕು ನೀಡುತ್ತವೆ. ಈ ತಾರತಮ್ಯದ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ವತ್ ಪೂರ್ಣಿಮಾ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿ ನಾವು ನಮ್ಮ ಬೇಡಿಕೆಯನ್ನು ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ