Categories: Main News

ರಸ್ತೆ ಅಪಘಾತ – ನಟ ಸಂಚಾರಿ ವಿಜಯ್ ತಲೆಗೆ ತೀವ್ರ ಪೆಟ್ಟು: ಪರಿಸ್ಥಿತಿ ತೀರಾ ಗಂಭೀರ

ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯ ಗೊಂಡಿದ್ದಾರೆ.

ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ನಟ ವಿಜಯ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ವಿಜಯ್ ಮೆದುಳಿನ ಬಲಭಾಗದಲ್ಲಿ ಹಾಗೂ ತೊಡೆಗೆ ತೀವ್ರ ಗಾಯವಾಗಿದೆ. ನಿನ್ನೆ ರಾತ್ರಿಯೇ ಶಸ್ತ್ರ ಚಿಕಿತ್ಸೆಯನ್ನು ಕೂಡ ವೈದ್ಯರು ಮಾಡಿದ್ದಾರೆ. ಚಿಕಿತ್ಸೆ ಮುಂದುವರಿದೆ.

ಸ್ನೇಹಿತನೊಂದಿಗೆ ಬೈಕ್​ನಲ್ಲಿ ಹಿಂದೆ ಕುಳಿತು ವಿಜಯ್ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೆದುಳಿನಲ್ಲಿ ರಕ್ತ ಸ್ರಾವವಾಗಿದೆ ಅಲ್ಲದೇ ತೊಡೆಯ ಮೂಳೆ ಕೂಡ ಮುರಿದಿದೆ ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಗೆ ತಂದಾಗಲೇ ಅವರ ಸ್ಥಿತಿ ಗಂಭೀರವಾಗಿತ್ತು. ಸ್ಕ್ಯಾನ್​ ಮಾಡಿದಾಗ ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗುತ್ತಿತ್ತು. ಹೀಗಾಗಿ, ಅವರಿಗೆ ಮೆದುಳಿನ ಆಪರೇಷನ್ ಅನ್ನು ನೆರವೇರಿಸಲಾಗಿದೆ. ಇದರೊಂದಿಗೆ ತೊಡೆ ಮೂಳೆಯ ಶಸ್ತ್ರ ಚಿಕಿತ್ಸೆ ಕೂಡ ನಡೆಸಬೇಕಿದೆ. ಇನ್ನು ಸಧ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ. ಮುಂದಿನ 48 ಗಂಟೆಗಳು ಅತ್ಯಂತ ಮುಖ್ಯ ಅಂತಾ ನ್ಯೂರೋ ಸರ್ಜನ್ ಡಾ. ಅರುಣ್ ನಾಯಕ್ ತಿಳಿಸಿದ್ದಾರೆ. ಅಲ್ಲದೇ ಸದ್ಯ ಅವರಿಗೆ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಅತಿ ಚಿಕ್ಕ ವಯಸ್ಸಿನಲ್ಲಿಯೇ ನಾನವನಲ್ಲ ಅವಳು ಅನ್ನೋ ಸಿನಿಮಾದ ನಟನೆಗಾಗಿ ಶ್ರೇಷ್ಠ ನಟ ರಾಷ್ಟ್ರೀಯ ಪ್ರಶಸ್ತಿಯನ್ನು ವಿಜಯ್ ಪಡೆದುಕೊಂಡಿದ್ದಾರೆ. ಅಲ್ಲದೇ ನಟ ರಂಗಾಯಣ ರಘು ಅವರ ಪತ್ನಿ ನಾಟಕಗಾರ್ತಿ ಮಂಗಳಾ ಅವರ ಸಂಚಾರಿ ತಂಡದಲ್ಲಿದ್ದರು.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜೂನ್ 16 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,900 ರೂಪಾಯಿ ದಾಖಲಾಗಿದೆ. 24… Read More

June 16, 2024

ಸೋಲಿಗೆ ಹತಾಶಯ ಬೇಡ,ದೃಢ ಸಂಕಲ್ಪದಿಂದ ಮುನ್ನುಗ್ಗಿ – ಎಂ.ಕೆ. ಸವಿತ

ಮೈಸೂರು : ಸೋಲಿಗೆ ಹತಾಶರಾಗಬೇಡಿ. ದೃಢ ಸಂಕಲ್ಪ ಮಾಡಿ ಮುನ್ನುಗಿದರೆ ಗೆಲುವು ಸುಲಭ ಎಂದು ಮೈಸೂರು ವಿಭಾಗದ ಪ್ರವಾಸೋಧ್ಯಮ ಇಲಾಖೆಯ… Read More

June 15, 2024

ಪೆಟ್ರೋಲ್ ಡಿಸೇಲ್ ಮೇಲಿನ ಸೆಸ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ರಾಜ್ಯ ಸರ್ಕಾರ ಜನತೆಗೆ ಬಹು ದೊಡ್ಡ ಶಾಕ್ ನೀಡಿದೆ. ಪೆಟ್ರೋಲ್,… Read More

June 15, 2024

ಶೀಘ್ರದಲ್ಲೇ ಜಿಪಂ, ತಾ ಪಂ ಚುನಾವಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಶೀಘ್ರದಲ್ಲೇ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರ… Read More

June 15, 2024

ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೇಂದ್ರ ಸಚಿವ ಎಚ್ ಡಿ ಕೆ

ಬೆಂಗಳೂರು : ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ… Read More

June 15, 2024

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ದರ್ಶನ್‌ ರವರಿಂದ ಸ್ಪೋಟಕ ಮಾಹಿತಿ

ಬೆಂಗಳೂರು : ಶೆಡ್‌ನಿಂದ ನಾನು ಬಂದ ಮೇಲೆ ಇವರೆಲ್ಲರು ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ ಎಂದು ದರ್ಶನ್‌… Read More

June 15, 2024