ಚಿಕ್ಕಬಳ್ಳಾಪುರ ಸಮೀಪ ರಸ್ತೆ ಅಪಘಾತ : ಆಂಧ್ರ ಮೂಲದ 12 ಮಂದಿ ದುರಂತ ಸಾವು

Team Newsnap
1 Min Read

ಚಿಕ್ಕಬಳ್ಳಾಪುರ : ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಟಾಟಾಸುಮೋ ಡಿಕ್ಕಿ ಹೊಡೆದು 12 ಮಂದಿ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ 6.30 ರ ಸುಮಾರಿಗೆ ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ನಡೆದಿದೆ.

ಮೃತರು ಆಂಧ್ರದ ಗೊರೆಂಟ್ಲ ಮೂಲದವರಾಗಿದ್ದು ಬೆಂಗಳೂರಿನ ಹೊಂಗಸಂದ್ರದಲ್ಲಿ ವಾಸವಾಗಿದ್ದರು. ದಸರಾ ಹಬ್ಬಕ್ಕೆ ಗೊರೆಂಟ್ಲ ಗ್ರಾಮಕ್ಕೆ ತೆರಳಿದ್ದ ಇವರು ಹಬ್ಬ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಅರುಣಾ, ನವೀನ್ ಕುಮಾರ್, ನಂಜುಂಡಪ್ಪ, ಪದ್ಮಾವತಿ, ಋತ್ವಿಕ್ ಕುಮಾರ್ ಮೃತಪಟ್ಟಿದ್ದಾರೆ. ಉಳಿದ ಹೆಸರು ಲಭ್ಯವಾಗಿಲ್ಲ.

ಇಂದು ಬೆಳಗ್ಗೆ ಅತಿಯಾದ ಮಂಜು ಇತ್ತು. ಈ ಕಾರಣಕ್ಕೆ ಚಾಲಕನಿಗೆ ರಸ್ತೆಯ ಗುರುತು ಸಿಗದೇ ನಿಂತಿದ್ದ ಟ್ಯಾಂಕರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ.ನಟ ದರ್ಶನ್, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ಗೆ ಅರಣ್ಯ ಇಲಾಖೆ ನೋಟೀಸ್

ಟಾಟಾ ಸುಮೋ ಬಹಳ ವೇಗವಾಗಿ ಸಂಚರಿಸುತಿತ್ತು. ಹೈದರಾಬಾದ್ – ಬೆಂಗಳೂರು ಹೈವೇಯಲ್ಲಿ ರಸ್ತೆಯ ಗುರುತು ಸಿಗದೇ ಈ ಕಾರು ಗುದ್ದಿರಬಹುದು. ಕಾರಿನಲ್ಲಿದ್ದ 14 ಮಂದಿ ಪೈಕಿ 10 ಮಂದಿ ಸ್ಥಳದಲ್ಲೇ ಸಾವನಪ್ಪಿದ್ದರೆ ಇಬ್ಬರು, ಮೂವರು ಮಾತ್ರ ಉಸಿರಾಡುತ್ತಿದ್ದರು ಎಂದು ತಿಳಿಸಿದ್ದಾರೆ

Share This Article
Leave a comment