ಮೇಲುಕೋಟೆ ಬಳಿ ರಸ್ತೆ ಅಪಘಾತ – ಮನ್ ​ಮುಲ್​ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರುಗೆ ಗಂಭೀರ ಗಾಯ

Team Newsnap
0 Min Read

KSRTC ಬಸ್​ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮನ್ ಮುಲ್ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು ಗಂಭೀರ ಗಾಯಗೊಂಡಿದ್ದಾರೆ.

ಪಾಂಡಪುರ ತಾಲೂಕಿನ ಮೇಲುಕೋಟೆ ತಿರುವಿನ ಬಳಿ ಸಂಭವಿಸಿದ KSRTC ಹಾಗೂ CAR ನಡುವೆ ಸಂಭವಿಸಿದ
ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಮನ್ ಮುಲ್ ನ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರ ಸ್ಥಿತಿ ಗಂಭೀರವಾಗಿದೆ. ಕಾರು ಚಾಲಕನೂ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಬ್ಬರನ್ನೂ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment