ಸಾಮೂಹಿಕ ಅತ್ಯಾಚಾರ ಪ್ರಕರಣದ ಗಂಭೀರ ಚರ್ಚೆ : ಸುಖ ನಿದ್ರೆಗೆ ಜಾರಿದ ರೋಹಿಣಿ ಸಿಂಧೂರಿ

Team Newsnap
1 Min Read

ವಿಧಾನ ಪರಿಷತ್​​ನಲ್ಲಿ ಬುಧವಾರ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಸದಸ್ಯರು ಗಂಭೀರ ಚರ್ಚೆಯಲ್ಲಿ ತೊಡಗಿದ್ದರೆ, ಅಧಿಕಾರಿಗಳ ಗ್ಯಾಲರಿ ಯಲ್ಲಿ ಕುಳಿತಿದ್ದ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾತ್ರ ನಿದ್ರೆಗೆ ಜಾರಿದ್ದು ಕ್ಯಾಮರಾ ಗೆ ಸೆರೆಯಾಯಿತು.

ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರವಾಗಿ ಪರಿಷತ್ ವಿಪಕ್ಷ ನಾಯಕ ಎಸ್. ಆರ್.ಪಾಟೀಲ್ ಮಾತನಾಡುತ್ತಿದ್ದರು. ಈ ವೇಳೆ ರೋಹಿಣಿ ಸಿಂಧೂರಿ ನಿದ್ರೆಗೆ ಜಾರಿದ್ದು ಕಂಡುಬಂದಿದೆ.

ಇನ್ನೊಂದೆಡೆ ವಿಧಾನಸಭೆಯಲ್ಲಿಯೂ ಕೂಡ ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರ ಪ್ರತಿಧ್ವನಿಸಿತು.

ವಿಪಕ್ಷಗಳ ನಾಯಕರು ಸರ್ಕಾರದ ವಿರುದ್ಧ ಹರಿಹಾಯ್ದರು. ಅಲ್ಲದೇ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅತ್ಯಾಚಾರ ಪ್ರಕರಣದ ಕುರಿತು ಚರ್ಚೆ ನಡೆಸುವಾಗ ಭಾವುಕರಾಗಿ ಕಣ್ಣೀರು ಹಾಕಿದ ಘಟನೆ ನಡೆಯಿತು.

Share This Article
Leave a comment