Main News

ರೋಹಿಣಿ ಸಿಂಧೂರಿ ವಿರುದ್ಧ ಗುಡುಗಿದ ಸಾ ರಾ

ನಮ್ಮ ರಾಜ್ಯದ ಹಣ ಬೇರೆಯವರ ಪಾಲಾಗುತ್ತಿದೆ. ಇದಕ್ಕೆ ರೋಹಿಣಿ ಸಿಂಧೂರಿಯವರೇ ಕಾರಣ ಎಂದು ಕೆ.ಆರ್.ನಗರದ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ನೂತನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಗುಡುಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಾ ರಾ ಮಹೇಶ್, ತಾವು ಆರೋಪಿಸುತ್ತಿರುವ ವಿಷಯಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಬಿಡುಗಡೆ ಮಾಡಿ ‘ಮೈಸೂರಿನ ಮಹಾರಾಜರು ಕರ್ನಾಟಕ ಸರ್ಕಾರಕ್ಕೆ 7 ಎಕರೆ ನಿವೇಶನ ನೀಡಿದ್ದರು. ಆ ಜಾಗದಲ್ಲಿ ಸರ್ಕಾರ ಒಂದು ಸಂಕೀರ್ಣ ನಿರ್ಮಾಣ ಮಾಡಲು 200 ರು ಕೋಟಿಯನ್ನೂ ಬಿಡುಗಡೆ ಮಾಡಿತ್ತು. ಈಗ ತಿರುಪತಿಯ ಟಿಟಿಡಿ ಸಂಕೀರ್ಣ ಕಾಮಗಾರಿಯ ನಿರ್ಮಾಣ ಮತ್ತು ಉಸ್ತುವಾರಿಯನ್ನು ವಹಿಸಿಕೊಂಡಿದೆ. ಕಟ್ಟಡದ ಒಳಾಂಗಣ ವಿನ್ಯಾಸ ಮತ್ತು ವಾಸ್ತುಶಿಲ್ಪ ಕೆಲಸಗಳ ಗುತ್ತಿಗೆಯನ್ನು ಮೈ.ಗಾಯತ್ರಿ ಅಂಡ್ ನಮಿತ್ ಆರ್ಕಿಟೆಕ್ಟ್‌ಗೆ ನೀಡಲಾಗಿದೆ. ಈ ಕೆಲಸಗಳ ಸಂಬಂಧ ಆರ್ಕಿಟೆಕ್ಟ್ ಕಂಪನಿಗೆ 1998ರ ಅನ್ವಯ 10 ಕೋಟಿಯ ವಿನಾಯ್ತಿ ನೀಡಲಾಗಿದೆ. ಹಾಗಾದರೆ‌ 10 ಕೋಟಿ ಎಲ್ಲಿ ಹೋಯಿತು?ಈ ಕೃತ್ಯದ ಹಿಂದೆ ಅಂದು ಮುಜರಾಯಿ ಇಲಾಖೆಯ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿಯವರ ಪಾತ್ರವಿದೆ’ ಎಂದು ಆರೋಪಿಸಿದರು.

ಹಾಗೆಯೇ ಶ್ರವಣ ಬೆಳಗೋಳ ಹಗರಣದ ಬಗ್ಗೆ ಮಾತನಾಡಿದ ಅವರು ‘ರೋಹಿಯವರು ಹಾಸನದ ಜಿಲ್ಲಾಧಿಕಾರಿಯಾಗಿದ್ದಾಗ ಶ್ರವಣ ಬೆಳಗೋಳದ ಮಹಾಮಸ್ತಾಭಿಷೇಕಕ್ಕೆ 175 ಕೋಟಿ ಹಣ ಬಿಡುಗಡೆ ಮಾಡಿದ್ದರು. ಆದರೆ ಇದರಲ್ಲೂ ಅನೇಕ ಹಗರಣಗಳಾಗಿವೆ. ಸದ್ಯದಲ್ಲೇ ದಾಖಲೆಗಳೊಂದಿಗೆ ನಿಮ್ಮ ಮುಂದೆ ಬರುತ್ತೇನೆ’ ಎಂದರು.

ವರ್ಗಾವಣೆಯ ಕುರಿತು ಸದ್ಯ ಎದ್ದಿರುವ ವಿವಾದದ ಕುರಿತು ಮಾತನಾಡಿರುವ ಅವರು ‘ಈಗ ರಾಜ್ಯದಲ್ಲಿ ವರ್ಗಾವಣೆಯ ದಂಧೆಯೇ ಪ್ರಾರಂಭವಾಗಿದೆ. ಒಂದು ಕಡೆ ವರ್ಗವಾಗಬೇಕೆಂದರೆ 20 ಲಕ್ಷ ಲಂಚ ನೀಡಬೇಕು ಎಂದು ಅನೇಕ ಅಧಿಕಾರಿಗಳು ನನ್ನ ಬಳಿ ಹೇಳಿದ್ದಾರೆ’ ಎಂದು ಆರೋಪಿಸಿದರು.

Team Newsnap
Leave a Comment
Share
Published by
Team Newsnap
Tags: #rohini

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024