Trending

ಐಪಿಎಲ್‍ನಲ್ಲಿ ವಿಶೇಷ ಸಾಧನೆಗೆ ರೋಹಿತ್ ಶರ್ಮಾ ಚಿತ್ತ

ಇಂದು ನಡೆಯಲಿರುವ ಐಪಿಎಲ್-2020ಯ ಫೈನಲ್ ಆಡುವ ಮೂಲಕ ಹೊಸ ಸಾಧನೆ ಮಾಡಲು ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ರೋಹಿತ್ ಶರ್ಮಾ ಸಿದ್ಧವಾಗಿದ್ದಾರೆ.

ದುಬೈ ಮೈದಾನದಲ್ಲಿ ಐಪಿಎಲ್-2020 ಫೈನಲ್ ಪಂದ್ಯ ನಡೆಯಲಿದೆ. ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿರುವ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಪೈನಲ್ ಪಂದ್ಯದಲ್ಲಿ ಸೆಣೆಸಾಡಲಿವೆ.

ಇಂದು ಸಂಜೆ ಏಳು ಗಂಟೆಗೆ ಮ್ಯಾಚ್ ಆರಂಭವಾಗಲಿದೆ. ಈ ಪಂದ್ಯ ಆಡಲಿರುವ ರೋಹಿತ್ ಶರ್ಮಾ ಹೊಸ ಸಾಧನೆಯ ಅಂಚಿನಲ್ಲಿದ್ದಾರೆ.

ಐಪಿಎಲ್‍ನಲ್ಲಿ 2008ರಿಂದಲೂ ಆಡಿಕೊಂಡು ಬಂದಿರುವ ರೋಹಿತ್ ಇಲ್ಲಿಯವರೆಗೂ ಬರೋಬ್ಬರಿ 199 ಪಂದ್ಯಗಳನ್ನು ಆಡಿದ್ದಾರೆ. ಇಂದು ನಡೆಯಲಿರುವ ಫೈನಲ್ ಅಲ್ಲಿ ರೋಹಿತ್ ಆಡುವ ಮೂಲಕ ಐಪಿಎಲ್‍ನಲ್ಲಿ 200 ಪಂದ್ಯಗಳನ್ನಾಡಿದ ಎರಡನೇ ಆಟಗಾರ ಎಂಬ ಸಾಧನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿಯವರು 200 ಪಂದ್ಯಗಳನ್ನಾಡಿ, 200 ಐಪಿಎಲ್ ಪಂದ್ಯಗಳನ್ನಾಡಿದ ಮೊದಲ ಆಟಗಾರ ಎಂಬ ಸಾಧನೆ ಮಾಡಿದ್ದರು.

ಐಪಿಎಲ್‍ನಲ್ಲಿ 5,162 ರನ್ ಗಳಿಸಿರುವ ರೋಹಿತ್ ಶರ್ಮಾ ಐಪಿಎಲ್‍ನ ಐದನೇ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‍ಮನ್ ಆಗಿದ್ದಾರೆ. ಜೊತೆಗೆ ಐಪಿಎಲ್‍ನಲ್ಲಿ ಒಂದು ಶತಕ ಮತ್ತು 38 ಅರ್ಧಶತಕಗಳನ್ನು ಬಾರಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ರೋಹಿತ್, ಕೇವಲ ಏಳು ಆವೃತ್ತಿಯಲ್ಲಿ ತಮ್ಮ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವನ್ನು ನಾಲ್ಕು ಬಾರೀ ಚಾಂಪಿಯನ್ ಆಗುವಂತೆ ಮಾಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024