crime

ಅನ್ ಲೈನ್ ಮೋಸದ ಸುಳಿಗೆ ಸಿಲುಕಿದ್ದ ನಿರ್ದೇಶಕಿ ರೂಪ ಅಯ್ಯರ್ – ಸೈಬರ್ ಗೆ ದೂರು

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರು ಆನ್‌ಲೈನ್‌ನಲ್ಲಿ ಅತಿ ದೊಡ್ಡ ಮೋಸಗಾರರ ಜಾಲಕ್ಕೆ ಸಿಲುಕಿದ್ದು, ಸ್ವಲ್ಪದರಲ್ಲೇ ಬಚಾವ್ ಆಗಿದ್ದಾರೆ.

ಸೈಬರ್ ಖದೀಮರ ವಂಚನೆಯ ಸುಳಿವು ಗೊತ್ತಾಗುತ್ತಿದ್ದಂತೆ ರೂಪಾ ಅಯ್ಯರ್ ಅವರು ಬೆಂಗಳೂರಿನ ತ್ಯಾಗರಾಜನಗರ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದಾರೆ.

ಕಳೆದ 2 ದಿನದ ಹಿಂದಷ್ಟೇ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ನಾವು ಸಿಸಿಬಿ ಅಧಿಕಾರಿಗಳು ಅಂತ ಹೇಳಿ ರೂಪಾ ಅವರಿಗೆ ಕರೆ ಮಾಡಿದ ನಂತರ ಮಾತನಾಡುತ್ತಾ ಮನಿ ಲ್ಯಾಂಡ್ರಿಂಗ್‌ನಲ್ಲಿ ನಿಮ್ಮ ಫೋನ್ ನಂಬರ್‌, ಹೆಸರು ಕೇಳಿ ಬರುತ್ತಿದೆ ಅಂತ ಹೇಳಿದ್ರಂತೆ.

ರೂಪಾ ಅಯ್ಯರ್‌ ಅವರನ್ನು ಬೆದರಿಸಿರುವ ಸೈಬರ್ ಕಳ್ಳರು, ವಿಡಿಯೋ ಕಾಲ್ ಮಾಡಿ ಹಣ ದೋಚೋಕೆ ಮುಂದಾಗಿದ್ದಾರೆ. ಮುಂಬೈ ಪೊಲೀಸ್ ಠಾಣೆಯಿಂದ ಕರೆ ಮಾಡುತ್ತಿದ್ದೇವೆ ಎನ್ನುತ್ತಾ 24 ಗಂಟೆಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿದ್ದಾರೆ. 24 ಗಂಟೆಗಳ ಕಾಲ ವಿಡಿಯೋ ಕಾಲ್‌ನಲ್ಲೇ ಇದ್ದು ಮನೆಯಿಂದ ಹೊರಗೆ ಬರದಂತೆ ತಡೆ ಹಿಡಿದಿದ್ದಾರೆ.

ನರೇಶ್ ಗೋಯಲ್ ಮನಿ ಲ್ಯಾಂಡ್ರಿಂಗ್ ಕೇಸ್‌ನಲ್ಲಿ ನಿಮ್ಮ ಹೆಸರು ಕೇಳಿದೆ. ದೇಶದಲ್ಲಿ 247 ಜನರನ್ನು ಗುರುತಿಸಲಾಗಿದೆ. ನಿಮ್ಮ ಸಿಮ್ ಬಳಸಿ ದೇಶದ್ರೋಹಿ ದಂಧೆ ಮಾಡ್ತಿದ್ದಾರೆ ಅಂತ ಹೇಳಿದ್ರಂತೆ. ವಿಡಿಯೋ ಕಾಲ್‌ನಲ್ಲಿ ಕಾಟ ಕೊಟ್ಟ ಫೇಕ್ ಅಧಿಕಾರಿಗಳು ರೂಪಾ ಅಯ್ಯರ್‌ಗೆ 30 ಲಕ್ಷ ರೂಪಾಯಿ ನೀಡುವಂತೆ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ.

ನಂತರ ಎಚ್ಚೆತ್ತುಕೊಂಡ ರೂಪಾ ಅಯ್ಯರ್ ಅವರು ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ.ಅಕ್ಷಯ ತೃತೀಯ ಬಂತು ಮತ್ತೇ ಖುಷಿಯ ತಂತು

ರೂಪಾ ಅಯ್ಯರ್ ಅವರು ಇದು ಫೇಕ್ ಅಂತ ತಿಳಿದು ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ. ಇದು ಆನ್‌ಲೈನ್‌ ಖದೀಮರ ನಯಾ ವೇಷ. ದಿನಕ್ಕೊಂದು ಖತರ್ನಾಕ್ ಐಡಿಯಾ ಜೊತೆಗೆ ಖದೀಮರು ಮೋಸ ಮಾಡಲು ಜಾಲ ಬೀಸುತ್ತಿದ್ದಾರೆ

Team Newsnap
Leave a Comment

Recent Posts

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More

May 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024