ಪ್ರಧಾನ ಮಂತ್ರಿ ಮೋದಿ ನಾಳೆ ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು – ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 7 ಗಂಟೆಯಿಂದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ.
ಅಗತ್ಯಸೇವೆ ಮತ್ತು ಹಾಲಿನ ವಾಹನಗಳಿಗೆ ಮಾತ್ರ ಬೆಳಿಗ್ಗೆ 9 ಗಂಟೆಯವರೆಗೆ ಸರ್ವೀಸ್ ರಸ್ತೆಯಲ್ಲಿ ತೆರಳಲು ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ತೀವ್ರ ಹೃದಯಾಘಾತದಿಂದ ನಿಧನ
- ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಕಾಲೋನಿಯ ಬಳಿ ನಡೆಯುವ ಮಾನ್ಯ ಪ್ರದಾನ ಮಂತ್ರಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುವ ವಾಹನಗಳಿಗೆ ಈ ಕೆಳಕಂಡಂತೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
- ಮಳವಳ್ಳಿ ಕಡೆಯಿಂದ ಬರುವ ವಾಹನಗಳು ಕೆ.ಎಂ.ದೊಡ್ಡಿ-ಹುಣ್ಣನದೊಡ್ಡಿ, ಬೋರಾಪರ ಗೇಟ್ ಮಾರ್ಗವಾಗಿ ಮದ್ದೂರಿಗೆ 04 ಕಿಲೋ ಮೀಟರ್ ಹಿಂದಕ್ಕೆ ಎಡಗಡೆ ಕುದುರುಗುಂಡಿ ಕಾಲೋನಿಗೆ ಹೋಗುವ ಮಾರ್ಗದಲ್ಲಿ ಹೋಗಿ ಪಾರ್ಕಿಂಗ್ ಸ್ಥಳಕ್ಕೆ ತೆರಳುವುದು.
- ಮದ್ದೂರು ಮತ್ತು ಸುತ್ತಮುತ್ತಲ ಕಡೆಯಿಂದ ತೆರಳುವ ವಾಹನಗಳು, ಮದ್ದೂರು- ಐ.ಬಿ.ವೃತ್ತ- ಮಳವಳ್ಳಿ
ರಸ್ತೆಯಿಂದ ಸುಮಾರು 04 ಕಿ.ಮೀ ಮುಂದಕ್ಕೆ ಹೋಗಿ ಬಲಗಡೆಗೆ ಕುದುರುಗುಂಡಿ ಕಾಲೋನಿಗೆ ಹೋಗುವ ಮಾರ್ಗದಲ್ಲಿ ಹೋಗಿ ಪಾರ್ಕಿಂಗ್ ಸ್ಥಳಕ್ಕೆ ತೆರಳುವುದು. - ಗೆಜ್ಜಲಗೆರೆ ಸುತ್ತಮುತ್ತಲ ಗ್ರಾಮಗಳಿಂದ ತೆರಳುವವರು ಗೆಜ್ಜಲಗೆರೆ ಅಂಡರ್ಪಾಸ್ನಿಂದ ಕುದುರುಗುಂಡಿ ಗ್ರಾಮ, ಸಾದೋಳಲು ಕುದುರುಗುಂಡಿ ಕಾಲೋನಿ ಮಾರ್ಗವಾಗಿ ಪಾರ್ಕಿಂಗ್ ಜಾಗಕ್ಕೆ ತೆರಳುವುದು
- ಮಂಡ್ಯ ಕಡೆಯಿಂದ ಬರುವ ವಾಹನಗಳು ಹನಕೆರೆ ಸರ್ವೀಸ್ ರೋಡ್ನಿಂದ ಗೆಜ್ಜಲಗೆರೆ ಗ್ರಾಮದ ಬಳಿಬಂದು ಗೆಜ್ಜಲಗೆರೆ ಅಂಡರ್ಪಾಸ್ನಿಂದ ಕುದುರುಗುಂಡಿ ಗ್ರಾಮ, ಸಾದೋಳಲು ಕುದುರುಗುಂಡಿ ಕಾಲೋನಿ ಮಾರ್ಗವಾಗಿ ಪಾರ್ಕಿಂಗ್ ಜಾಗಕ್ಕೆ ತೆರಳುವುದು.
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ
- ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK
- ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ