October 18, 2024

Newsnap Kannada

The World at your finger tips!

muniratna 1

ಆರ್​​.ಆರ್ ನಗರ ಚುನಾವಣೆ ‘ಸುಪ್ರೀಂ ತೀರ್ಪು; ಮುನಿರತ್ನಗೆ ಬಿಗ್​​ ರಿಲೀಫ್

Spread the love

ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅವಕಾಶ ನೀಡಬಾರದು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಈ ನಿರ್ಧಾರದಿಂದ ನಿಗದಿಯಾದಂತೆ ನವೆಂಬರ್ 3ರಂದು ಆರ್ ಆರ್ ನಗರ ಉಪಚುನಾವಣೆ ನಡೆಯಲಿದೆ.

ಬಿಜೆಪಿಯ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಮಂಗಳವಾರ ತೀರ್ಪಿನ ನಂತರ ಉಪ ಚುನಾವಣೆ ನಡೆಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ.

2018ರ ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಕಲಿ ಮತದಾರರ ಪಟ್ಟಿ ದೊರೆತ ಹಿನ್ನೆಲೆ, ಮಾಜಿ ಶಾಸಕ ಮುನಿರತ್ನ ವಿರುದ್ಧ ಚುನಾವಣಾ ಅಕ್ರಮ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಪ್ರತಿಸ್ಪರ್ಧಿ ತುಳಸಿ ಮುನಿರಾಜುಗೌಡ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಇಂದು ಸುಪ್ರಿಂಕೋರ್ಟ್​ ಮಹತ್ವದ ನಿರ್ಧಾರ ಕೈಗೊಂಡಿದ್ದು ತುಳಸಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ರಾಜರಾಜೇಶ್ವರಿನಗರದ ಟಿಕೆಟ್ ಆಕಾಂಕ್ಷಿಯಾಗಿರೋ ಮುನಿರತ್ನ ದಾರಿ ಸುಗಮವಾದಂತಾಗಿದೆ.

Copyright © All rights reserved Newsnap | Newsever by AF themes.
error: Content is protected !!