Trending

ರಾಯಲ್ಸ್ ಆಟಕ್ಕೆ ಮುಂಬೈ ಗಡಗಡ

ಐಪಿಎಲ್ 20-20ಯ 43ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ, ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 8 ವಿಕೆಟ್‌ಗಳ ಜಯ ದಾಖಲಿಸಿತು.

ದುಬೈನ ಶೇಕ್ ಜಯೇದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಮ್‌ಐ ತಂಡಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

ಮುಂಬೈ ತಂಡದಿಂದ ಮೈದಾನಕ್ಕಿಳಿದ ಐ‌.ಕಿಶನ್ ಮತ್ತು ಡಿ.ಕಾಕ್ ಆಟಕ್ಕೆ ಸಾಧಾರಣ ಆರಂಭ ನೀಡಿದರು. ಕಿಶನ್ 36 ಬಾಲ್‌ಗಳಿಗೆ 37 ರನ್ ಗಳಿಸಿದರೆ, ಕಾಕ್ ಕೇವಲ‌ 6 ರನ್‌ಗಳಿಗೆ ಜೋಫ್ರಾ ಅರ್ಚರ್ ಅವರ ಬೌಲಿಂಗ್‌ನಲ್ಲಿ ಬೋಲ್ಡ್ ಆದರು. ನಂತರ ಬಂದ ಎಸ್ ಯಾದವ ಹಾಗೂ ಎಸ್. ತಿವಾರಿ‌ ಕ್ರಮವಾಗಿ 40 ರನ್ (26 ಬಾಲ್‌ಗಳಿಗೆ) ಮತ್ತು 34 ರನ್ (25 ಬಾಲ್‌ಗಳಿಗೆ) ಗಳಿಸಿದರು. ತದನಂತರ ಬಂದ ಹಾರ್ಥಿಕ್ ಪಾಂಡ್ಯ 21 ಬಾಲ್‌ಗಳಿಗೆ 60 ರನ್‌ ಗಳಿಸಿ ತಂಡದ ಮೊತ್ತವನ್ನು 195 ಕ್ಕೆ ತಲುಪಿಸಿದರು. ಮಿಂಚಿನಾಟ ಆಡಿದರೂ ತಂಡ ಸೋಲನ್ನೊಪ್ಪಿಕೊಳ್ಳಲೇಬೇಕಾಯಿತು. ಎಮ್‌ಐ ತಂಡ‌ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 195 ರನ್‌‌ ಗಳಿಸಿತು.

ಮುಂಬೈ ಬೃಹತ್ ಟಾರ್ಗೆಟ್ ಕೊಟ್ಟಿದ್ದರು ಆರ್‌ಆರ್ ತಂಡದಿಂದ ರಾಬಿನ್ ಉತ್ತಪ್ಪ ಹಾಗೂ ಬಿ. ಸ್ಟೋಕ್ಸ್ ಮೈದಾನಕ್ಕೆ ಇಳಿದರು. ಉತ್ತಪ್ಪ ಕೇವಲ 13 ರನ್‌ಗಳಿಗೆ ಪೆವಿಲಿಯನ್ ಸೇರಿದರು. ಆದರೆ, ಸ್ಟೋಕ್ಸ್ ತಂಡದ ಗೆಲುವಿಗಾಗಿ 60 ಬಾಲ್‌ಗಳಲ್ಲಿ 107 ರನ್‌ಗಳ ದೊಡ್ಡ ಮೊತ್ತವನ್ನು ತಂಡಕ್ಕೆ ನೀಡಿದರು. ಸ್ಯಾಮ್ಸನ್ 31 ಬಾಲ್‌ಗಳಿಗೆ 54 ರನ್ ಗಳಿಕೆ‌ ಮಾಡಿದರು. ಆರ್‌ಆರ್ ತಂಡ 18.2 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿ ಪಂದ್ಯದಲ್ಲಿ ಜಯಶಾಲಿಯಾಯಿತು.

Team Newsnap
Leave a Comment
Share
Published by
Team Newsnap

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024