ತಾಲಿಬಾನ್ಗೂ ಆರ್ಎಸ್ಎಸ್ಗೂ ವ್ಯತ್ಯಾಸ ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಇದು ಸಿದ್ದರಾಮಯ್ಯಗೂ ಗೊತ್ತಿದೆ. ಆದರೆ ಕೆಣಕಬೇಕು, ಚುಚ್ಚಬೇಕು, ಅಪಹಾಸ್ಯ ಮಾಡಬೇಕೂಂತ ಅವರು (ಮಾಜಿ ಮುಖ್ಯಮಂತ್ರಿ) ಈ ರೀತಿ ಹೇಳುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಮಂಗಳವಾರ ಸಚಿವರು ಮಾತನಾಡಿದರು. ದೇಶದ ಹಿತಕ್ಕಾಗಿ ಕೆಲಸ ಮಾಡಲು ಕಲಿಸುತ್ತೆ ಆರ್.ಎಸ್.ಎಸ್. ದೇಶದ ವಿಚಾರ ಬಂದಾಗ ವೈಯಕ್ತಿಕ ವಿಚಾರ ಬಲಿಕೊಟ್ಟು ರಾಷ್ಟ್ರದ ಸಂರಕ್ಷಣೆ ಮಾಡು ಎನ್ನತ್ತೆ ಅದು. ಈ ರೀತಿ ಹೇಳುವುದು ಆರ್ಎಸ್ಎಸ್ ಮಾತ್ರ. ಆದ್ದರಿಂದ ನಾವು ಅದನ್ನು ಪ್ರೀತಿಸುತ್ತೇವೆ. ರಾಷ್ಟ್ರಪತಿ, ಪ್ರಧಾನಿ, ಉಪರಾಷ್ಟ್ರಪತಿ, ರಾಜ್ಯದ ಗೃಹಮಂತ್ರಿ ಎಲ್ಲರೂ ಆರ್ಎಸ್ಎಸ್ನಿಂದ ಬಂದವರೇ ಎಂದು ವಿವರಿಸಿದರು.
ಯಾರಿಗೆ ಮನುಷ್ಯತ್ವ ಇಲ್ಲ, ಯಾರಿಗೆ ಮನುಷ್ಯತ್ವ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಆರಗ ಜ್ಞಾನೇಂದ್ರ, ವಿರೋಧ ಪಕ್ಷದ ನಾಯಕನಿಗೆ ಮಾತಿನಿಂದಲೇ ತಿವಿದರು.
ಆರ್ಎಸ್ಎಸ್ ನವರದ್ದು ತಾಲಿಬಾನ್ ಸಂಸ್ಕೃತಿ. ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚಿಗೆ ಹೇಳಿದ್ದರು.
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
More Stories
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು