ಆರ್ ಎಸ್ಎಸ್ ಮತ್ತು ಎಸ್ ಡಿಪಿಐ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ಆರ್ ಎಸ್ಎಸ್ ಕಾರ್ಯಕರ್ತರೊಬ್ಬರು ಸಾವನ್ನಪ್ಪಿರುವ ಘಟನೆ ಕೇರಳ ಜಿಲ್ಲೆಯ ಅಲಪುಳ ಜಿಲ್ಲೆಯ ನಾಗಮಕುಲಂಗರದಲ್ಲಿ ನಡೆದಿದೆ.
ಆರ್ ಎಸ್ಎಸ್ ಕಾರ್ಯಕರ್ತ ನಂದು (22 ವರ್ಷ) ಎಂಬಾತನೇ ಕೊಲೆಯಾದ ದುರ್ದೈವಿ.
ಬುಧವಾರ ರಾತ್ರಿ ಚೆರ್ತಲಾ ಬಳಿಯ ವಯಾಲಾರ್ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕಾರ್ಮಿಕನನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಘರ್ಷಣೆಯಲ್ಲಿ ಆರಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅಲಪುಳ ಮತ್ತು ಎರ್ನಾಕುಲಂ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಬಿಜೆಪಿ ಹಮ್ಮಿಕೊಂಡಿದ್ದ ವಿಜಯಯಾತ್ರೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾಸರಗೋಡಿಗೆ ಭೇಟಿ ನೀಡಿದ್ದರು.
ಇದರ ಬೆನ್ನಲ್ಲೇ ಎಸ್ ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಆರ್ಎಸ್ಎಸ್ ಕಾರ್ಯಕರ್ತರು ಬುಧವಾರ ಎಸ್ಡಿಪಿಐ ವಿರುದ್ಧ ಘೋಷಣೆಗಳನ್ನು ಎತ್ತಿಕೊಂಡು ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಂತರದ ದಿನಗಳಲ್ಲಿ, ಎಸ್ಡಿಪಿಐ ಕಾರ್ಯಕರ್ತರು ಸಹ ಪ್ರತಿಭಟನಾ ಮೆರವಣಿಗೆ ನಡೆಸಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ಘರ್ಷಣೆಯಲ್ಲಿ ಕೊನೆಗೊಂಡಿದೆ.
ಕ್ಷುಲಕ ಕಾರಣಕ್ಕೆ ಈ ಘರ್ಷಣೆ ನಡೆಡಿದೆ.
ಆರ್ ಎಸ್ಎಸ್ ಕಾರ್ಯಕರ್ತ ನಂದು ಹತ್ಯೆಯನ್ನು ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಖಂಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ