ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ ರೂಪಾ ಮಾತನಾಡದಂತೆ ವಿಧಿಸಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿದೆ.
ಕಳೆದ 2 ತಿಂಗಳ ಹಿಂದೆ ಇಬ್ಬರು ಉನ್ನತ ಮಹಿಳಾ ಅಧಿಕಾರಿಗಳ ನಡುವಿನ ಜಟಾಪಟಿ ಗೆ ಸಂಬಂಧಿಸಿದಂತೆ ರೋಹಿಣಿ ವಿರುದ್ಧ ಮಾತನಾಡದಂತೆ ರೂಪಾಗೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು.
ಈ ಮಧ್ಯಂತರ ಆದೇಶವನ್ನು ರೂಪಾ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು, ಇದೀಗ ನ್ಯಾಯಾಲಯ ಪ್ರತಿಬಂಧಕಾಜ್ಞೆಯನ್ನು ತೆರವುಗೊಳಿಸಿದೆ.
ರೂಪಾಗೆ ಸೋಷಿಯಲ್ ಮೀಡಿಯಾ ಸೇರಿದಂತೆ ಯಾವುದೇ ರೀತಿಯ ಮಾಧ್ಯಮಗಳಲ್ಲಿ ರೋಹಿಣಿ ವಿರುದ್ಧ ಮಾನಹಾನಿಕರ ಹೇಳಿಕೆ, ಬರಹಗಳನ್ನು ಪೋಸ್ಟ್ ಮಾಡದಂತೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿತ್ತು.
ಅಲ್ಲದೆ ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ಸಲ್ಲಿಸಿದ್ದರು. ರೋಹಿಣಿ ವಿರುದ್ಧ ಇರುವ ಆರೋಪ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ವೇಳೆ ರೂಪಾ ಅವರಿಂದ ವೈಯಕ್ತಿಕ ಮಟ್ಟದಲ್ಲಿ ವಾಗ್ದಾಳಿಗೆ ತುತ್ತಾಗಿದ್ದ ರೋಹಿಣಿಗೆ ಕೋರ್ಟ್ ಮೂಲಕ ಬಿಗ್ ರಿಲೀಫ್ ಸಿಕ್ಕಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು