ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸಿಎಂ ಬಿಎಸ್ ವೈ ವಿರುದ್ದವೇ ತೊಡೆ ತಟ್ಟಿದ್ದಾರೆ.
ಸಚಿವ ಈಶ್ವರಪ್ಪನವರ ಗಮನಕ್ಕೆ ಬಾರದೇ ಆರ್ಡಿಪಿಆರ್ ಇಲಾಖೆಯ ಅನುದಾನವನ್ನು ಸಿಎಂ ಬಿ.ಎಸ್. ಯಡಿಯೂರಪ್ಪನವರು ಹಂಚಿದ್ದಾರೆ ಎಂದು ರಾಜ್ಯಪಾಲರೂ ಸೇರಿದಂತೆ ಕೇಂದ್ರದ ನಾಯಕರಿಗೆ ದೂರು ನೀಡಿದ್ದಾರೆ.
ಈಶ್ವರಪ್ಪ ದೂರಿಗೆ ತಕ್ಷಣವೇ ಪ್ರತಿಕ್ರಿಯೆ ನೀಡಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಮಾಡಿದ ಆದೇಶವನ್ನು ತಡೆಹಿಡಿಯಿರಿ ಎಂದು ಈಶ್ವರಪ್ಪನವರಿಗೆ ಸಲಹೆ ನೀಡಿದ್ದಾರೆ.
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮತ್ತು ಬಿಜೆಪಿ ಪ್ರಧಾನಿ ಕಾರ್ಯದರ್ಶಿ ಸಿಟಿ ರವಿ ಸಹ ಸಹ ಆದೇಶಕ್ಕೆ ಸಹಿ ಹಾಕಬಾರದೆಂದು ಆರ್ಡಿಪಿಆರ್ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇತ್ತ ಈಶ್ವರಪ್ಪ ಸೂಚನೆ ನೀಡದ ಹಿನ್ನೆಲೆ ಆರ್ಡಿಪಿಆರ್ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರಿಗೆ ಸಿಎಂ ಬಿಎಸ್ವೈ ತರಾಟೆ ತೆಗೆದುಕೊಂಡಿದ್ದಾರಂತೆ.
ಎಲ್ಕೆ ಅತೀಕ್ ಅವರನ್ನು ಕಚೇರಿಗೆ ಕರೆಸಿದ ದಿಎಂ ನನ್ನ ಮಾತಿಗೆ ಬೆಲೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರಂತೆ. ಇದಕ್ಕೆ ಈಶ್ವರಪ್ಪ ಸಹಿ ಹಾಕುವುದು ಬೇಡವೆನ್ನುತ್ತಿದ್ದಾರೆಂದು ಸಿಎಂಗೆ ಎಲ್ಕೆ ಅತೀಕ್ ಉತ್ತರ ನೀಡಿದ್ದಾರೆ ಎನ್ನುವ ಮಾಹಿತಿ ಇದೆ.
ಹೈಮಾಂಡ್ ಸೂಚನೆ ಮೇರೆಗೆ ಅನುದಾನ ಹಂಚಿಕೆ ತಡೆ ಹಿಡಿದಿರುವ ಈಶ್ವರಪ್ಪ ಕಡತಕ್ಕೆ ಸಹಿ ಹಾಕದೇ ಸಿಎಂ ವಿರುದ್ಧ ತೊಡೆ ತಟ್ಟಿದ್ದಾರೆ ಎನ್ನಲಾಗಿದೆ.
ಅನುದಾನದ ಬಗ್ಗೆ ಕೆಲವು ಶಾಸಕರಿಂದ ಸಚಿವ ಈಶ್ವರಪ್ಪ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ವೇಳೆ ನನ್ನ ಎಲ್ಲಾ ಹಕ್ಕನ್ನು ಸಿಎಂ ಕಿತ್ತುಕೊಳ್ಳುತ್ತಿದ್ದಾರೆ ಎಂದು ಈಶ್ವರಪ್ಪ ಬೇಸರ ಹೊರಹಾಕಿದ್ದಾರೆ.
ಅನುದಾನ ತಾರತಮ್ಯದ ಬಗ್ಗೆ ಸಿಎಂ ಬಳಿಯೇ ಮಾತನಾಡಿ ಎಂದು ಈಶ್ವರಪ್ಪ ಶಾಸಕರಿಗೆ ಹೇಳಿದ್ದಾರಂತೆ. ಈಶ್ವರಪ್ಪನವರ ಅನುದಾನದ ದೂರಿನ ಬಗ್ಗೆ ಅಮಿತ್ ಶಾ, ಮೋದಿ ಪ್ರತಿಕ್ರಿಯೆ ನೀಡಿ, ನಿಮ್ಮ ದೂರ ಸ್ವೀಕೃತಿಯಾಗಿದೆ ಎಂದು ಸ್ವೀಕೃತ ಪತ್ರ ಕಳುಹಿಸಿದ್ದಾರೆಂದು ಹೇಳಲಾಗಿದೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment