filmy

ಸಮಂತಾಗೆ ಅಪರೂಪದ ಕಾಯಿಲೆ: ಮೌನ ಮುರಿದ ನಟಿ – ‘ ಮೈಯೋಸಿಟಿಸ್ ‘ಗೆ ಚಿಕಿತ್ಸೆ

ಟಾಲಿವುಡ್ ( Tollywood ) ನಟಿ ಸಮಂತಾ ( Samantha ) ಸದ್ಯ ‌ʻಯಶೋದಾʼ ( Yashoda )ಚಿತ್ರದ ಟ್ರೈಲರ್ ಮೂಲಕ ಸೌಂಡ್ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ತಮ್ಮ ಆರೋಗ್ಯದ ಕುರಿತು ಸಮಂತಾ ಇದೀಗ ಮೌನ ಮುರಿದಿದ್ದಾರೆ. ಆರೋಗ್ಯದ ಸ್ಥಿತಿಯ ಬಗ್ಗೆ ನಟಿ ರಿವೀಲ್ ಮಾಡಿದ್ದಾರೆ.

ಯಶೋದಾ' ಚಿತ್ರದ ಟ್ರೈಲರ್‌ನಿಂದ ( Trailer ) ಸಮಂತಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದ್ದಾರೆ.‘ ಯಶೋದಾ’ ಚಿತ್ರದ ಟ್ರೈಲರ್‌ಗೆ ಒಳ್ಳೆಯ ಪ್ರತಿಕ್ರಿಯೆ ಬಂದಿದೆ.

ತಾವು ಮೈಯೋಸಿಟಿಸ್ ( Myositis ) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದಾಗಿ ಫೋಟೋ ಜೊತೆ ಪೋಸ್ಟ್ ಮಾಡಿ ತಿಳಿಸಿದ್ದಾರೆ.KSRTC ಯಲ್ಲಿ ಬಸ್ ನಲ್ಲಿ 30 ಕೆಜಿವರೆಗೆ ಲಗೇಜ್ ಉಚಿತ : ನಾಯಿಗೆ ಪುಲ್, ಮರಿಗೆ ಅರ್ಧ ಟಿಕೆಟ್

ವೈದ್ಯಕೀಯ ಸ್ಥಿತಿಯಲ್ಲಿ ರೆಕಾರ್ಡಿಂಗ್ ಸ್ಟುಡಿಯೋದಲ್ಲಿರುವ ತಮ್ಮ ಫೋಟೋವನ್ನು ಸಮಂತಾ ಶೇರ್ ಮಾಡಿ, ʻಯಶೋದಾʼ ಟ್ರೈಲರ್‌ಗೆ ಅಭಿಮಾನಿಗಳ ಪ್ರತಿಕ್ರಿಯೆ ಧನ್ಯವಾದ ತಿಳಿಸಿದ್ದಾರೆ. ಮೈಯೋಸಿಟಿಸ್ ಹೆಸರಿನ ಅಪರೂಪದ ಕಾಯಿಲೆ ಇದೆ. ಈ ಕಾಯಿಲೆ ಬಂದರೆ ವ್ಯಕ್ತಿ ಕುಗ್ಗುತ್ತಾನೆ. ದೇಹದಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಸ್ನಾಯು ಸೆಳೆತ ಶುರುವಾಗುತ್ತದೆ. ಸ್ವಲ್ಪ ದೂರ ನಡೆದರೂ ಸುಸ್ತು ಎನಿಸುತ್ತದೆ. 30-60ರ ವಯಸ್ಸಿನವರಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ.

ಇದಕ್ಕೆ ಸರಿಯಾದ ಚಿಕಿತ್ಸೆ ಕೊಡದೆ ಇದ್ದರೆ ದಿನ ಕಳೆದಂತೆ ಪರಿಸ್ಥಿತಿ ಬೇರೆಯ ಹಂತಕ್ಕೆ ಹೋಗುತ್ತದೆ. ಈಗ ಸಮಂತಾ ಕೂಡ ಇದೇ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ನಾನು ಒಳ್ಳೆಯ ದಿನ ಮತ್ತು ಕೆಟ್ಟ ದಿನಗಳನ್ನು ಹೊಂದಿದ್ದೇನೆ. ದೈಹಿಕವಾಗಿ ಮತ್ತು ಭಾವನಾತ್ಮಕವಾಗಿ ಕೂಡ. ಇನ್ನೂ ಒಂದು ದಿನವನ್ನು ಎದುರಿಸಲು ಸಾಧ್ಯವಿಲ್ಲ ಎಂದು ಅನಿಸಿದಾಗಲೂ, ಹೇಗಾದರೂ ಆ ಕ್ಷಣ ಹಾದು ಹೋಗುತ್ತದೆ. ನಿಮ್ಮೆಲ್ಲರನ್ನೂ ನಾನು ಪ್ರೀತಿಸುತ್ತೇನೆ ಎಂದು ಸಮಂತಾ ಪೋಸ್ಟ್ ಮಾಡಿದ್ದಾರೆ. ನೆಚ್ಚಿನ ನಟಿ ಸಮಂತಾ ಆದಷ್ಟೂ ಬೇಗ ಗುಣಮುಖರಾಗಿ ಬರಲಿ ಎಂಬುದೇ ಅಭಿಮಾನಿಗಳ ಆಶಯ.

Team Newsnap
Leave a Comment

Recent Posts

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More

April 29, 2024

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024