Karnataka

ಸ್ಯಾಂಡಲ್​ವುಡ್​ಗೆ 17ರ ಕಂಟಕ; ಅಪ್ಪು ಸೇರಿ ಮೂವರು ನಟರು ಇಹಲೋಕ ತ್ಯಜಿಸಿದ್ದೇಕೆ ?

ಪುನೀತ್ ರಾಜ್​ಕುಮಾರ್​ ನಿಧನದ ನಂತರ ಅವರು ಹುಟ್ಟಿದ 17 ರ ಸಂಖ್ಯೆ ಭಾರೀ ಚರ್ಚೆಗೆ ಕಾರಣವಾಗಿದೆ. ಪುನೀತ್ 17ನೇ ತಾರೀಖಿನಂದು ಹುಟ್ಟಿದ ಬಹುದೊಡ್ಡ ಮೂವರು ನಟರನ್ನು ಅಲ್ಪಾವಧಿಗೆ ಸ್ಯಾಂಡಲ್​ವುಡ್ ಕಳೆದುಕೊಂಡಿದೆ.

ಕಳೆದ ಒಂದೂವರೆ ವರ್ಷಗಳ ಅಂತರದಲ್ಲಿ ಸ್ಯಾಂಡಲ್​​ವುಡ್​​ ಮೂವರು ಪ್ರತಿಭಾವಂತ ನಟರನ್ನು ಕಳೆದುಕೊಂಡಿದೆ.
ಈ ಲೋಕ ಬಿಟ್ಟು ಹೋದ ಮೂವರು ನಟರು 17ನೇ ತಾರೀಖಿನಂದು ಹುಟ್ಟಿದ ಪ್ರತಿಭಾನ್ವಿತ ಕಲಾವಿದರಾಗಿದ್ದಾರೆ. ಒಂದು ಚಿರಂಜೀವಿ ಸರ್ಜಾ, ಸಂಚಾರಿ ವಿಜಯ್ ಹಾಗೂ ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್.

ಚಿರಂಜೀವಿ ಸರ್ಜಾ:
ಅಕ್ಟೋಬರ್ 17, 1984ರಲ್ಲಿ ಚಿರಂಜೀವಿ ಸರ್ಜಾ ಜನಿಸಿದ್ದರು. ನಂತರದ ದಿನಗಳಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟು ಜನಪ್ರಿಯತೆ ಗಳಿಸಿದ್ದರು. ಆದರೆ ವಿಧಿಲಿಖಿತ ಬೇರಯದ್ದೇ ಆಗಿತ್ತು. 2020 ಜೂನ್ 7 ರಂದು ಹಠಾತ್ ಹೃದಯಘಾತದಿಂದ ನಿಧನರಾದರು

ಸಂಚಾರಿ ವಿಜಯ್:

ಸಕಲ ಕಲಾ ವಲ್ಲಭ ಸಂಚಾರಿ ವಿಜಯ್, ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಎಂದೇ ಕರೆಯಲಾಗುತ್ತಿತ್ತು. ಜುಲೈ 17, 1983 ರಲ್ಲಿ ಜನಿಸಿದ್ದ ಇವರೂ ಕೂಡ ನಮ್ಮನ್ನು ಅಗಲಿದ್ದಾರೆ. 2021, ಜೂನ್ 15 ರಂದು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೇ ನಮ್ಮನ್ನ ಬಿಟ್ಟು ಹೋಗಿದ್ದಾರೆ.

ಪುನೀತ್ ರಾಜ್​ಕುಮಾರ್​:
ಈಗ ಪುನೀತ್​ ರಾಜ್​ಕುಮಾರ್ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪುನೀತ್ ರಾಜ್​ಕುಮಾರ್ ಮಾರ್ಚ್​​ 17, 1975ರಲ್ಲಿ ಜನಿಸಿದ್ದರು. ಕಾಕತಾಳಿಯ ಎಂಬುವಂತೆ, 17ನೇ ತಾರೀಖಿನಂದೇ ಜನಿಸಿ, ಸ್ಟಾರ್​​ಗಿರಿ ಪಡೆದುಕೊಂಡು ಅತೀ ಕಡಿಮೆ ವಯಸ್ಸಿನಲ್ಲಿಯೇ ಸಮಾಜಕ್ಕೆ, ಕನ್ನಡ ಸಿನಿಮಾ ಇಂಡಸ್ಟ್ರಿಗೆ ಅಪಾರವಾದ ಕೊಡುಗೆಗಳನ್ನು ನೀಡಿ ಬಹು ದೂರ ನಡೆದುಬಿಟ್ಟಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024