ಬಿಜೆಪಿಗೆ ಗುಡ್ ಬೈ ಹೇಳಲು ಮಾಜಿ ಎಂಎಲ್​ಸಿ ಸಂದೇಶ್ ನಾಗರಾಜ್ ನಿರ್ಧಾರ – ಕಾಂಗ್ರೆಸ್ ಸೇರ್ಪಡೆಗೆ ತಯಾರಿ

Team Newsnap
1 Min Read
Former MLC Sandesh Nagaraj's decision to say goodbye to BJP - preparation for Congress joining ಬಿಜೆಪಿಗೆ ಗುಡ್ ಬೈ ಹೇಳಲು ಮಾಜಿ ಎಂಎಲ್​ಸಿ ಸಂದೇಶ್ ನಾಗರಾಜ್ ನಿರ್ಧಾರ - ಕಾಂಗ್ರೆಸ್ ಸೇರ್ಪಡೆಗೆ ತಯಾರಿ

ಮೈಸೂರು ಭಾಗದಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ. ಮಾಜಿ ಸಚಿವ ಎಚ್. ವಿಶ್ವನಾಥ್​ ಕಾಂಗ್ರೆಸ್​ ಸೇರುವುದು ಖಚಿತವಾಗುವ ಬೆನ್ನಲ್ಲೇ ಈಗ ಮಾಜಿ ಎಂಎಲ್​ಸಿ ಸಂದೇಶ್ ನಾಗರಾಜ್ ಕೂಡ ಬಿಜೆಪಿ ತೊರೆಯುವುದಾಗಿ ಸೋಮವಾರ ಪ್ರಕಟಿಸಿದರು.

ಮೈಸೂರು ಭಾಗದಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಲಿಎಂಬ ಸುದ್ದಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂದೇಶ್​ ನಾಗರಾಜ್​, ನಾನು ಬಿಜೆಪಿಯಲ್ಲಿ ಸದ್ಯ ಸಕ್ರಿಯನಾಗಿಲ್ಲ. ಸಂವಿಧಾನ ಉಳಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ – ಕಾಂಗ್ರೆಸ್ ನಾಯಕ ಪಟೇರಿಯಾ

ಅಕ್ರಮವಾಗಿದ್ದೇನೆ. ಬಿಜೆಪಿಯವರು ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಅನ್ಯಾಯ ಮಾಡಿದರು ಎಂದರು.ಮೋಸ , ಅನ್ಯಾಯ ಮಾಡೋದರಲ್ಲಿ ಈ ಬಿಜೆಪಿಯವರು ನಿಸ್ಸೀಮರು ಎಂದು ಆರೋಪಗಳ ಸುರಿಮಳೆಗೈದರು.

ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ :

ಬಿಜೆಪಿಯ ಸಹವಾಸ ನನಗೆ ಸಾಕು. ಎಚ್.ವಿಶ್ವನಾಥ್​ಗೂ ಅನ್ಯಾಯ ಮಾಡಿದರು. ನನಗೂ ಅನ್ಯಾಯ ಮಾಡಿದರು. ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ. ಸಿದ್ದರಾಮಯ್ಯರ ಜತೆ ಮಾತಾಡಿದ್ದೀನಿ. ಡಿ.ಕೆ. ಶಿವಕುಮಾರ್​​ರ ಜತೆಯೂ ಮಾತಾಡುವೆ ಎಂದು ಹೇಳಿದರು

ವಿಜಯೇಂದ್ರನನ್ನು ಬಲಿ ಕೊಡಲು ಕ್ಷೇತ್ರ ಸಿದ್ದತೆ :

ಬಿಜೆಪಿಯವರು ಯಡಿಯೂರಪ್ಪರನ್ನು ಒಳ್ಳೆತನದಲ್ಲಿ ಮುಗಿಸಿದರು. ಆ ವೇಳೆಯೇ ಬಿಜೆಪಿಗೆ 40 ಸ್ಥಾನ ನಷ್ಟವಾಯ್ತು. ಈಗ ವಿಜಯೇಂದ್ರನನ್ನು ವರುಣಕ್ಕೆ ತರುವ ಮೂಲಕ ಅವರನ್ನು ಮುಗಿಸಲು ಹೊರಟ್ಟಿದ್ದಾರೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಬಿಜೆಪಿಯದು ಎಂದು ಸಂದೇಶ್​ ನಾಗರಾಜ್​ ಗಂಭೀರ ಆರೋಪ ಮಾಡಿದರು.

ವಿಜಯೇಂದ್ರನನ್ನು ಬಲಿ ಕೊಡಲೆಂದೇ ವರುಣ ಕ್ಷೇತ್ರಕ್ಕೆ ಕರೆ ತರುತ್ತಿದ್ದಾರೆ. ವಿಜಯೇಂದ್ರಗೆ ರಾಜಕೀಯ ಭವಿಷ್ಯ ಚೆನ್ನಾಗಿ ಇರಬೇಕಾದರೆ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಲಿ. ಬಿಜೆಪಿಯಿಂದ 10ಕ್ಕಿಂತ ಹೆಚ್ಚು ಶಾಸಕರು ಕಾಂಗ್ರೆಸ್​ಗೆ ಬರುತ್ತಾರೆ ಎಂದು ಹೊಸ ಬಾಂಬ್​ ಸಿಡಿಸಿದರು.

Share This Article
Leave a comment