ಶ್ರೀರಂಗಪಟ್ಟಣ ತಾಲೂಕಿನ ಗಂಜಾಂನ ನಿಮಿಷಾಂಭ ದೇವಿ ಗೆ ಹರಕೆ ಹೊತ್ತ 22 ಗಂಟೆಗಳಲ್ಲೇ ಸ್ಯಾಂಟ್ರೋ ರವಿ ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ಶನಿವಾರ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅಲೋಕ್ ಕುಮಾರ್ ಅವರು, ದೇವಿ ಮೇಲೆ ಹನ್ನೆರಡು ವರ್ಷಗಳಿಂದ ನನಗೆ ನಂಬಿಕೆ ಇದೆ. 2011 ರಲ್ಲಿ ಮೈಸೂರಿನಲ್ಲಿ ಡಬಲ್ ಮರ್ಡರ್ ಕೇಸ್ ಆಗಿತ್ತು.
ಆಗಲೂ ಬಂದು ನಾನು ದೇವಿಗೆ ಹರಕೆ ಹೊತ್ತಿದ್ದೆ. ಹಾಗೆ ಹರಕೆ ಹೊತ್ತು ಪೂಜೆ ಸಲ್ಲಿಸಿ ನಾವು ಮೈಸೂರಿಗೆ ಹೋಗುವುದರೊಳಗಾಗಿ ಅಂದರೆ ಐದೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು ಎಂದು ವಿವರಿಸಿದರು.
ನಾನು ಜನವರಿ 10ರಂದು ನಾನು ಇಲ್ಲಿಗೆ ಬಂದು ಪೂಜೆ ಸಲ್ಲಿಸಿ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಹರಕೆ ಹೊತ್ತಿದ್ದೆ.
ಈ ಬಾರಿಯೂ ಹರಕೆ ಹೊತ್ತ 22 ಗಂಟೆಗಳಲ್ಲೇ ಆರೋಪಿ ಸಿಕ್ಕಿದ್ದಾನೆ. ಹಾಗಾಗಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇನೆ ಎಂದರು.ಸೋಮವಾರದಿಂದ ‘ಬೆಂಗಳೂರು-ಮೈಸೂರಿ’ಗೆ ‘ಇವಿ ಪ್ಲಸ್ ಎಲೆಕ್ಟ್ರಿಕ್ ಬಸ್’ ಸಂಚಾರ ಆರಂಭ
ದೇವಿ ಮೇಲೆ ಅಪಾರವಾದ ನಂಬಿಕೆ ಇದೆ. ನಾನಗೂ ಬಹಳ ನಂಬಿಕೆ ಇದೆ. ಆತನಿಂದಾಗಿ ಸರ್ಕಾರಕ್ಕೆ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತಿತ್ತು. ಹಾಗಾಗಿ ಆತ ನಮಗೆ ಬೇಗ ಸಿಗಲಿ ಎಂದು ಹರಕೆ ಹೊತ್ತಿದ್ದೆ. ಆತ ಈಗ ನಮ್ಮ ಕಸ್ಟಡಿಯಲ್ಲಿದ್ದಾನೆ. ಆತನ ಹೇಳಿಕೆ ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ





More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು