ಜೆಡಿಎಸ್ ಶಾಸಕ ಸಾರಾ ಮಹೇಶ್ ಬುಧವಾರ ವಿಧಾನಸಭೆಯ ಬಾವಿಗೆ ಇಳಿದು ಧರಣಿ ನಡೆಸಿದ ಪ್ರಸಂಗ ಜರುಗಿದೆ.
ಅಧಿವೇಶನದ ವೇಳೆ ಮೈಸೂರಿನ ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೇಲೆ ಬಂದಿರುವ ಬ್ಯಾಗ್ ಖರೀದಿ ಅಕ್ರಮ ಆರೋಪ ಪ್ರಕರಣದ ಬಗ್ಗೆ ಚರ್ಚೆ ನಡೆಸಲು ಅನುಮತಿ ಕೇಳಿದರು.
ಸಾರಾ ಮಹೇಶ್ ಈಗಲೇ ಹಕ್ಕುಚ್ಯುತಿ ಸೂಚನೆಯ ಚರ್ಚೆ ನಡೆಸುವಂತೆ ಆಗ್ರಹಿಸಿದರು. ಆದರೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮತಿ ನೀಡಲಿಲ್ಲ.
ತಾವು ಮಾಡಿರುವ ಆರೋಪ ಗಂಭೀರವಾಗಿದೆ. ಚರ್ಚೆ ನಡೆಸಲು ಅನುಮತಿ ನೀಡಬೇಕೆಂದು ಆಗ್ರಹಿಸಿದ್ದರೂ ಸ್ಪೀಕರ್ ಒಪ್ಪಿಗೆ ನೀಡಲಿಲ್ಲ. ಹೀಗಾಗಿ ಚರ್ಚೆಗೆ ಪಟ್ಟು ಹಿಡಿದ ಸಾರಾ ಮಹೇಶ್ ಸದನದ ಬಾವಿಗಿಳಿದು ಧರಣಿ ನಡೆಸಿದರು.
ಕೊನೆಗೆ ಸ್ಪೀಕರ್ ಕಾಗೇರಿ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದ ಬಳಿಕ ಸಾರಾ ಮಹೇಶ್ ಧರಣಿಯನ್ನು ವಾಪಸ್ ಪಡೆದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ