ತಮ್ಮನ್ನು ಕಾನೂನು ಬಾಹಿರ ವರ್ಗಾವಣೆ ಮಾಡಲಾಗಿದೆ ಎಂದು ಪ್ರಶ್ನಿಸಿ ಸಿಎಟಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮತ್ತೆ ಅಕ್ಟೋಬರ್ 23ಕ್ಕೆ ಮುಂದೆ ಹೋಗಿದೆ.
ರಾಜ್ಯ ಸರ್ಕಾರವು ಬಿ. ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿದ ಒಂದೇ ತಿಂಗಳಲ್ಲೇ ಅವರನ್ನು ಬದಲಾಯಿಸಿ, ರೋಹಿಣಿ ಸಿಂಧೂರಿ ಅವರನ್ನು ಮೈಸೂರಿನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು.
ಸರ್ಕಾರದ ಈ ಕ್ರಮವನ್ನು ಖಂಡಿಸಿ ಶರತ್ ಸಿಎಟಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಇಂದು ಸಿಎಟಿ ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡಿದ ಶರತ್ ಪರ ವಕೀಲ ಎ.ಎಸ್. ಪೊನ್ನಣ್ಣ, ‘ಸರ್ಕಾರವು ಇವರನ್ನು ಅವಧಿಗೆ ಮುನ್ನವೇ ನಿಯಮ ಬಾಹಿರವಾಗಿ ವರ್ಗ ಮಾಡಿದೆ. ಎರಡು ವರ್ಷಗಳ ಕಡ್ಡಾಯ ಸೇವೆಯ ನಿಯಮವನ್ನು ಸರ್ಕಾರ ಪಾಲನೆ ಮಾಡಿಲ್ಲ ಹಾಗೂ ಶರತ್ ಅವರನ್ನು ವರ್ಗ ಮಾಡುವ ಮುನ್ನ ಯಾವುದೇ ಸಲಹಾ ಸಮಿತಿಯ ಅಭಿಪ್ರಾಯ ಪಡೆದಿಲ್ಲ. ಹಾಗಾಗಿ ಇವರ ವರ್ಗಾವಣೆ ದೋಷಪೂರಿತವಾದುದು’ ಎಂದು ವಾದಿಸಿದರು.
ತರುವಾಯ ರೋಹಿಣಿ ಸಿಂಧೂರಿ ಪರ ವಕೀಲರು ವಾದ ಮಂಡನೆ ಮಾಡಲು ಕಾಲಾವಕಾಶ ನೀಡಿದರು. ಹಾಗಾಗಿ ಸಿಎಟಿ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 23ಕ್ಕೆ ಮುಂದೂಡಿತು.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment