ಉಚ್ಚಾಟಿತ AIADMK ನಾಯಕಿ ಶಶಿಕಲಾ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಇಂದು ಭೇಟಿ ಮಾಡಿದರು.
ಚೆನ್ನೈನ ಪೋಯಸ್ ಗಾರ್ಡನ್ನಲ್ಲಿರುವ ರಜನಿಕಾಂತ್ ಮನೆಗೆ ಶಶಿಕಲಾ ಭೇಟಿ ನೀಡಿ ರಜನಿ ಆರೋಗ್ಯ ವಿಚಾರಿಸಿದರು.
ಸದ್ಯ ಶಶಿಕಲಾ ಮತ್ತೆ ತಮಿಳುನಾಡು ರಾಜಕೀಯ ಕ್ಷೇತ್ರದ ಮರುಪ್ರವೇಶಕ್ಕೆ ಚಿಂತನೆ ನಡೆಸಿದ್ದಾರೆ ಈ ಸಂದರ್ಭದಲ್ಲಿ ಶಶಿಕಲಾ, ರಜನಿ ಕಾಂತ್ ಅವರನ್ನು ಭೇಟಿಯಾಗಿದ್ದು ತಮಿಳುನಾಡು ರಾಜಕೀಯದಲ್ಲಿ ಭಾರೀ ಕುತೂಹಲನ್ನು ಮೂಡಿಸಿದೆ.
ಈ ನಡುವೆ ರಜನಿಕಾಂತ್ ಅವರಿಗೆ ದಾದಾ ಸಾಬ್ ಪಾಲ್ಕೆ ಪ್ರಶಸ್ತಿ ಬಂದ ಹಿನ್ನಲೆಯಲ್ಲಿ ಶಶಿಕಲಾ ರಜನಿಕಾಂತ್ ಅವರನ್ನು ಭೇಟಿ ಮಾಡಿ ಶುಭ ಕೋರಿದ್ದಾರೆ.
ಇದೇ ವೇಳೆ ರಜನಿ ಅವರ ಆರೋಗ್ಯದ ಬಗ್ಗೆ ಯೋಗಕ್ಷೇಮ ವಿಚಾರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಅಕ್ಟೋಬರ್ನಲ್ಲಿ ರಜನಿ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಶಶಿಕಲಾ ರಜನಿ ಅವರ ಆರೋಗ್ಯವನ್ನು ವಿಚಾರಿಸಿ ಅವರಿಗೆ ಹೂ ಗುಚ್ಚವನ್ನು ನೀಡಿದ್ದಾರೆ. ಬೇರೆ ಯಾವುದೇ ವಿಷಯ ಚಚೆ೯ಯಾಗಿಲ್ಲ ಎಂದು ಮೂಲಗಳು ಹೇಳಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು