ರಾಜ್ಯದಲ್ಲಿನ ರೂಪಾಂತರ ವೈರಸ್ ಸೋಂಕಿನ ಭೀತಿಯ ನಡುವೆಯೂ ಇಂದಿನಿಂದ ಶಾಲಾ-ಕಾಲೇಜು ಆರಂಭಗೊಳ್ಳುತ್ತಿದೆ.
ಇಂದು ಮುಂಜಾಗ್ರತಾ ಕ್ರಮವಾಗಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಮಾತ್ರ ಆರಂಭಗೊಳ್ಳಲಿವೆ.
ಕಠಿಣ ಪರಿಸ್ಥಿತಿಯಲ್ಲೂ ಆರಂಭವಾಗುತ್ತಿರುವ ಶಾಲೆ ಕಾಲೇಜು ಗಳಲ್ಲಿ ಕೈಗೊಳ್ಳುವ ಕ್ರಮಗಳ ಕುರಿತು ಒಂದಷ್ಟು ಮಾಹಿತಿ ಇಲ್ಲಿದೆ.
ವಿದ್ಯಾರ್ಥಿ’ಗಳಿಗೆ ಮಾರ್ಗದರ್ಶಿ ಸೂತ್ರಗಳು
1) 10 ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಧ ದಿನ ಮಾತ್ರ ತರಗತಿ.
2) ತರಗತಿಯು ಬೆಳಗ್ಗೆ 09.30 ರಿಂದ ಮಧ್ಯಾಹ್ನ 1.00 ರವರೆಗೆ ನಡಯಲಿದೆ.
3) ವಿದ್ಯಾರ್ಥಿಗಳು ಶಾಲಾ ಸಮವಸ್ತ್ರದಲ್ಲಿ ಶಾಲೆಗೆ ತೆರಳಬೇಕು. ಒಂದು ತರಗತಿಯಲ್ಲಿ 15 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ.
4) ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂತರ ಕಾಪಾಡಿಕೊಳ್ಳಬೇಕು.
5) ಶಾಲೆಗೆ ಹಾಜರಾಗದವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳು ಇವೆ.
6) ವಿದ್ಯಾರ್ಥಿಗಳಲ್ಲಿ ಕೆಮ್ಮು, ಶೀತ, ಜ್ವರ ಇತರ ಖಾಯಿಲೆಯ ಲಕ್ಷಣ ಕಂಡುಬಂದರೆ ಪ್ರತ್ಯೇಕ ಐಸೊಲೇಷನ್ ವ್ಯವಸ್ಥೆ ಮಾಡಿ ಪೋಷಕರಿಗೆ ಪರೀಕ್ಷೆ ಮಾಡಿಸಲು ಸೂಚಿಸಲಾಗುತ್ತದೆ. ಅಂತಹ ವಿದ್ಯಾರ್ಥಿಗಳು ಮನೆಯಲ್ಲೇ ಇರಬೇಕು.
7) ವಿದ್ಯಾರ್ಥಿಗಳು ಮನೆಯಿಂದಲೇ ಕುಡಿಯುವ ನೀರು, ಪ್ರತ್ಯೇಕ ಸ್ಯಾನಿಟೈಸರ್, ಸೋಪ್, ಟವಲ್, ಟಿಶ್ಯುಪೇಪರ್ ಬಳಸುವುದು.ತರಗತಿಯ ಇತರ ನೋಟ್ಸ್, ಬರವಣಿಗೆಯ ಸಾಮಗ್ರಿಗಳನ್ನು ಸಹ ಯಾರೊಂದಿಗೂ ಹಂಚಿಕೊಳ್ಳುವಂತಿಲ್ಲ
8) ಸಾಮೂಹಿಕ ಪ್ರಾರ್ಥನೆ ನಡೆಸಲು ಅವಕಾಶವಿಲ್ಲ. ವಿದ್ಯಾರ್ಥಿಗಳು ತಾವಿರುವ ಕೊಠಡಿಯಿಂದಲೇ ಪ್ರಾರ್ಥನೆ ನಡೆಸುವುದು.
ಪೋಷಕರಿಗೆ ಮಾರ್ಗದರ್ಶಿ ಸೂತ್ರಗಳು:
1)ಕೆಮ್ಮು, ಶೀತ, ಜ್ವರ ಇತರ ಯಾವುದೇ ಖಾಯಿಲೆಯ ಲಕ್ಷಣವಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸುವಂತಿಲ್ಲ.
ಮಕ್ಕಳಿಗೆ ಶಾಲೆಗೆ ಕಳುಹಿಸಲು ಯಾವುದೇ ಖಾಯಿಲೆ ಇಲ್ಲವೆಂದು, ಶಾಲೆಗೆ ಕಳಿಸಲು ಒಪ್ಪಿಗೆ ಇದೆ ಎಂಬ ದೃಢೀಕರಣ ಪತ್ರ ನೀಡುವುದು ಕಡ್ಡಾಯ.
2)ಮಕ್ಕಳಿಗೆ ಪ್ರತ್ಯೇಕವಾದ ಸ್ಯಾನಿಟೈಸರ್, ಮಾಸ್ಕ್, ಟವಲ್, ಸೋಪ್, ಟಿಶ್ಯುಗಳನ್ನು ಬಳಸುವಂತೆ ತಿಳಿಸುವುದು.
3)ಮಕ್ಕಳಿಗೆ ಶಾಲಾ ದಾಖಲಾತಿ ಕಡ್ಡಾಯ. ಆನ್ಲೈನ್ ಮತ್ತು ಆಫ್ಲೈನ ತರಗತಿಗಳು ಎರಡೂ ಸಹ ನಡೆಯುತ್ತವೆ
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment