ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ನೋಡಿಕೊಂಡು 1ರಿಂದ 5ನೇ ತರಗತಿಯವರೆಗಿನ ಶಾಲಾ ಆರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ಬೆಂಗಳೂರಿನಲ್ಲಿ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೊರೋನಾ ಪರಿಸ್ಥಿತಿ ಹೇಗೆ ಇರುತ್ತದೆ ಎಂದು ಈಗಲೇ ಹೇಳಲಾಗದು. ಹೀಗಾಗಿ ಪರಿಸ್ಥಿತಿ ನೋಡಿಕೊಂಡು ಶಾಲೆ ಗಳ ಆರಂಭದ ಬಗ್ಗೆ ನಿರ್ಧರಿಸಲಾಗು ವುದು ಎಂದರು.
ಸಭೆ-ಸಮಾರಂಭ, ರ್ಯಾಲಿಯಲ್ಲಿ ಜನ ಸೇರುವ ಸಂಬಂಧ ಸರ್ಕಾರ ಕೋವಿಡ್-೧೯ರನ್ವಯ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯ ಹಾದಿಯಲ್ಲಿದ್ದರೂ ರಾಜಕೀಯ ಸಭೆ, ಸಮಾರಂಭ, ರ್ಯಾಲಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುತ್ತಿರುವ ಬಗ್ಗೆ ಜನಸಾಮಾನ್ಯರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗಾಗಿ
ರ್ಯಾಲಿ , ಸಭೆ ಸಮಾರಂಭಗಳಿಗೆ ಪ್ರತ್ಯೇಕ ಮಾರ್ಗ ಸೂಚಿ ಬರಲಿದೆ ಎಂದರು.
ರಾಜ್ಯದಲ್ಲಿ ಇತ್ತೀಚಿಗಿನ ಅತಿವೃಷ್ಟಿಯಿಂದ ಉಂಟಾದ ಹಾನಿ ಬಗ್ಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಅವಶ್ಯಕ ನೆರವು ದೊರೆಯಲಿದೆ. ಕೇಂದ್ರ ತಂಡ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಣೆ ಮಾಡಿದ ನಂತರ ನಷ್ಟದ ಕುರಿತು ಅಂತಿಮ ಸಭೆ ನಡೆಸಲಾಗುವುದು ಎಂದು ವಿವರಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು