ಕೊರೊನಾ ಭೀತಿಯಿಂದ ಶಾಲೆಗಳು ಮುಚ್ಚಿ ಏಳೆಂಟು ತಿಂಗಳೆ ಕಳೆದಿವೆ. ಈಗ ಮತ್ತೆ ಶಾಲೆ ಆರಂಭಿಸಲು ವ್ಯಾಪಕ ವಿರೋಧವಿತ್ತು. ಇದರ ಮಧ್ಯೆ ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಲೆ ಆರಂಭಿಸುವ ಬಗ್ಗೆ ಸರ್ಕಾರ ಚಿಂತನೆ ಮಾಡಿದೆ.
ಈ ಸಂಬಂಧ ಖಾಸಗಿ ಶಾಲೆಯವರು, ಎಸ್ ಡಿಎಂಸಿ ಸದಸ್ಯರು, ಪೋಷಕರು ಮತ್ತು ತಜ್ಞರೊಡನೆ ಚರ್ಚೆ ನಡೆಸಿದ್ದ ಶಿಕ್ಷಣ ಇಲಾಖೆ ಈಗ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿದೆ.
1 ರಿಂದ 8 ನೇ ತರಗತಿ ತನಕದ ಪ್ರಾಥಮಿಕ ಶಿಕ್ಷಣ ಹೊರತುಪಡಿಸಿ, 9 ನೇ ತರಗತಿಯಿಂದ 12 ನೇ ತರಗತಿ ತನಕ ಶಾಲೆ ಆರಂಭಿಸಬಹುದು. ಆದರೆ ಇದಕ್ಕೆ ಹಲವು ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಶಾಲೆ ಆರಂಭದಿಂದ ಕೊರೊನಾ ವ್ಯಾಪಕವಾಗಿ ಹರಡಿದರೆ ಮತ್ತೆ ಮುಚ್ಚಬೇಕು. ಕೊರೊನಾ ಹರಡದಿದ್ದರೆ ಜನವರಿ ತಿಂಗಳಿನಿಂದ 1 ರಿಂದ 8 ನೇ ತರಗತಿಗಳಿಗೂ ಕೂಡ ಶಾಲೆ ಆರಂಭಿಸುವ ಬಗ್ಗೆ ಶಿಪಾರಸು ಮಾಡಲಾಗಿದೆ.
ಕೊರೊನಾ ಸೋಂಕಿತರ ಸಂಖ್ಯೆ ಈಗ ಶೇಕಡಾ 19 ರಿಂದ 2 ಪರ್ಸೆಂಟ್ ಕೆಳಗೆ ಇಳಿದಿದೆ. ಇದರಿಂದ ಶಾಲೆ ಆರಂಭ ಮಾಡಿದ್ರೆ ಏನೂ ತೊಂದರೆ ಆಗದು ಎಂದು ವರದಿಯಲ್ಲಿ ಶಿಪಾರಸು ಮಾಡಲಾಗಿದೆ. ಈಗಾಗಲೇ ಅರುಣಾಚಲ ಪ್ರದೇಶದಲ್ಲಿ 9 ರಿಂದ 12 ನೇ ತರಗತಿ ತನಕ ನವೆಂಬರ್ 17 ರಿಂದ ಶಾಲೆ ಆರಂಭವಾಗಲಿದೆ.
ಕೇಂದ್ರೀಯ ವಿದ್ಯಾಲಯ ಕೂಡ ಶಾಲೆ ಆರಂಭಿಸುತ್ತಿದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಕೂಡ ಶಾಲೆ ಆರಂಭಿಸಬೇಕು ಎಂದು ಕೆಲವು ಪೋಷಕರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಶಿಕ್ಷಣ ಇಲಾಖೆ ಆಯುಕ್ತರು ನೀಡಿರುವ ಶಿಪಾರಸು ವರದಿಯನ್ನು ಪ್ರಧಾನ ಕಾರ್ಯದರ್ಶಿಗಳು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಇಂದು ಸಲ್ಲಿಸುತ್ತಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವರದಿ ಸಲ್ಲಿಸಲಿದ್ದು, ಅಂತಿಮವಾಗಿ ಸಿಎಂ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment